ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm