ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm