ಬ್ರೇಕಿಂಗ್ ನ್ಯೂಸ್
20-02-24 12:01 pm HK News Desk ಕ್ರೈಂ
ಗೋಕರ್ಣ, ಫೆ 20: ಡ್ರಗ್ಸ್ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಸಾಫ್ಟ್ವೇರ್ ಡೆವಲಪರ್ಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರನ್ನು ಬಿಹಾರದ ಮುಂಗೇರ್ನ ಜಮಾಲ್ಪುರದ ಪಲ್ಲವಿ ಪ್ರಿಯಾ 29 ಮತ್ತು ಜಾರ್ಖಂಡ್ನ ಬೆರಾಮೊ, ಬೊಕಾರೊ ಮೂಲದ ಪ್ರಿಯಾ ರಾಯ್ (26) ಎಂದು ಗುರುತಿಸಲಾಗಿದೆ. ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ.
ಬಾಡಿಗೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದುದನ್ನು ಕಂಡ ಪೊಲೀಸರು ತಡೆದಿದ್ದಾರೆ. ಮಹಿಳೆಯರು ಕಾನ್ಸ್ಟೆಬಲ್ಗೆ ಅಸಭ್ಯ ಭಾಷೆಯಲ್ಲಿ ನಿಂದಿಸಿ ಹಲ್ಲೆ ಮಾಡಲು ಪ್ರಾರಂಭಿಸಿದರು. ಸ್ಥಳದಲ್ಲಿ ಜಮಾಯಿಸಿದ ಜನರು ಕಾನ್ಸ್ಟೆಬಲ್ನನ್ನು ರಕ್ಷಿಸಿ ಮಹಿಳೆಯರನ್ನು ಠಾಣೆಗೆ ಕರೆದೊಯ್ದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಠಾಣೆಯಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅಲ್ಲಿಯೂ ಮಹಿಳೆಯರು ಮತ್ತೆ ತಮ್ಮ ಕೃತ್ಯವನ್ನು ಪುನರಾವರ್ತಿಸಿದರು. ನಂತರ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ. ಪುಣ್ಯ ಕ್ಷೇತ್ರವಾದ ಗೋಕರ್ಣದಲ್ಲಿ ಡ್ರಗ್ಸ್ ಸೇವನೆ ಹಾಗೂ ಅಕ್ರಮ ಪಾರ್ಟಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಗೋಕರ್ಣದಲ್ಲಿ ಮಾದಕ ವಸ್ತು ಸೇವನೆ ಮತ್ತು ಗಲಾಟೆ ಸೃಷ್ಟಿಸಿದ ಮಹಿಳೆಯರನ್ನು ಬಂಧಿಸಿರುವುದು ಇದೇ ಮೊದಲು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Two women software developers from Bangalore arrested in Gokarna over consumption of drugs. The two way driving car after consuming drugs and Rammed Police Constable and assaulted him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm