ಬ್ರೇಕಿಂಗ್ ನ್ಯೂಸ್
20-02-24 02:20 pm HK News Desk ಕ್ರೈಂ
ಹುಬ್ಬಳ್ಳಿ, ಫೆ 20: ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಧಾರವಾಡದ ಆಸ್ಮಾ ವಂಚನೆಗೊಳಗಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿದ ಅಪರಿಚಿತರು ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ.
ಕುನಾಲ್ ಸಿಂಗ್, ಜ್ಯೋತಿ ಶರ್ಮಾ, ಪ್ರಿಯಾ, ಸಲಾಂದರ್, ರಿತು ವಿ ಶರ್ಮಾ, ರಾಹುಲ್ ಎಂಬ ಹೆಸರಿನವರು ಆಸ್ಮಾ ಅವರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಬಗ್ಗೆ ಹೇಳಿದ್ದರು. ಜೊತೆಗೆ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂದು ನಂಬಿಸಿ, ನಿಮ್ಮ ಹಣವನ್ನು ನಾವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕೊಡುತ್ತೇವೆ ಎಂದ ಹಣ ವರ್ಗಾಯಿಸಿಕೊಂಡಿದ್ದರು. ನನ್ನ ಖಾತೆಯಿಂದ 23.58 ಲಕ್ಷ ರೂ ವರ್ಗಾಯಿಸಿಕೊಂಡಿದ್ದಾರೆ. ಆ ಬಳಿಕ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಂಚಕರು ಸಾಮಾಜಿಕ ಜಾಲತಾಣದ ಮೂಲಕ ಪರಿಚಿತರಾಗಿ ನಂಬಿಸಿ ಮೋಸ ಮಾಡುತ್ತಾರೆ. ಷೇರು ಮಾರುಕಟ್ಟೆಯ ಹೆಸರಲ್ಲಿ ಹಣ ದುಪ್ಪಟ್ಟು ಮಾಡಿ ಕೊಡುವುದಾಗಿ ಹೇಳಿ ಪಂಗನಾಮ ಹಾಕುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಆದ್ದರಿಂದ ಜನರು ಅಪರಿಚಿತರಿಗೆ ತಮ್ಮ ದಾಖಲಾತಿಗಳನ್ನು ನೀಡುವುದು, ಹಣ ವರ್ಗಾಯಿಸುವುದನ್ನು ಮಾಡಬಾರದು ಎಂದು ಪೊಲೀಸರು ಜಾಗೃತಿ ಮೂಡಿಸತ್ತಲೇ ಇದ್ದಾರೆ.
ಪೊಲೀಸ್ ಆಯುಕ್ತರಿಂದ ಗಡಿಪಾರು ಆದೇಶ: ಹು - ಧಾ ಮಹಾನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಸುಲಿಗೆ ಮಾಡುತ್ತ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಆರೋಪದ ಮೇಲೆ ತಳೇಹುಬ್ಬಳ್ಳಿ ಶಿವಶಂಕರ ಕಾಲೊನಿಯ ನಿವಾಸಿ ಅರ್ಜುನ ಬುಗುಡಿಯನ್ನು ಗಡಿಪಾರು ಮಾಡಿ ನಗರ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
ಆಟೊ ಚಾಲಕನಾಗಿದ್ದ ಅರ್ಜುನ ಗುಂಪು ಕಟ್ಟಿಕೊಂಡು ಸಾರ್ವಜನಿಕರಿಗೆ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ. ರಾತ್ರಿ ವೇಳೆ ಲಾರಿಗಳನ್ನು ತಡೆದು ಚಾಲಕರ ಮೇಲೆ ಹಲ್ಲೆ ನಡೆಸಿ ದರೋಡೆ ಕೃತ್ಯ ಎಸಗುತ್ತ, ಭಯದ ವಾತಾವರಣ ಸೃಷ್ಟಿಸುತ್ತಿದ್ದ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣಗಳಿದ್ದು, ರೌಡಿ ಪಟ್ಟಿಯಲ್ಲಿ ಸಹ ಸೇರ್ಪಡೆಯಾಗಿದೆ. ಹೀಗಿದ್ದರೂ ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿದ್ದರಿಂದ ತುಮಕೂರು ಜಿಲ್ಲೆಯ ಶಹರ ಠಾಣೆ ವ್ಯಾಪ್ತಿಗೆ ಆರು ತಿಂಗಳ ಕಾಲ ಗಡಿಪಾರು ಮಾಡಲಾಗಿದೆ ಎಂದು ಹು - ಧಾ ಪೊಲೀಸರ ಕಮೀಷನರ್ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
Dharwad Women cheated of 23 lakhs of fraud in Promsing big money in stock market.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:28 pm
HK News Staffer
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm