ಬ್ರೇಕಿಂಗ್ ನ್ಯೂಸ್
24-02-24 05:21 pm HK News Desk ಕ್ರೈಂ
ಬೆಳಗಾವಿ, ಫೆ.24: ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್ಗೂ ಹೆಚ್ಚು ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಈ ಕಳ್ಳಭಟ್ಟಿ ಸಾರಾಯಿ ಅಡ್ಡೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದರು.
ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಯ ತಂಡದಿಂದ ಕಾರ್ಯಾಚರಣೆ ನಡೆದಿದ್ದು, ಕಳ್ಳಭಟ್ಟಿ ಸಂಗ್ರಹಿಸಿದ್ದ ಮನೆಯ ಮೇಲೆ ದಾಳಿ ಮಾಡಲಾಗಿದೆ. ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ದಾಳಿ ವೇಳೆ 200 ಲೀಟರ್ ಕಳ್ಳಭಟ್ಟಿ ಇರುವ 26 ಬ್ಯಾರಲ್, 30 ಲೀಟರ್ ಕಳ್ಳಭಟ್ಟಿ ಇರುವ 17 ಬ್ಯಾರಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದಾಜು 12 ಲಕ್ಷ ರೂ. ಮೌಲ್ಯದ ಕಳ್ಳಭಟ್ಟಿ ಸಾರಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ, "ಒಟ್ಟು 5700 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದಿದ್ದೇವೆ. ಕೆಲವು ಮನೆಗಳ ಮೇಲೂ ದಾಳಿ ಮಾಡಿ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಒಂದು ವಾರದ ಹಿಂದೆ ಬಂದ ಮಾಹಿತಿ ಆಧರಿಸಿ ಇಂದು ಕಾರ್ಯಾಚರಣೆ ನಡೆಸಿದ್ದೇವೆ. ಪೊಲೀಸರು ಬಂದ ತಕ್ಷಣ ಎಲ್ಲರೂ ಓಡಿ ಹೋಗಿದ್ದಾರೆ. ಒಬ್ಬ ಆರೋಪಿ ಮಾತ್ರ ಸಿಕ್ಕಿ ಬಿದ್ದಿದ್ದಾನೆ. ಕೆಲವು ದಿನಗಳಿಂದ ಇಲ್ಲಿ ಕಳ್ಳಭಟ್ಟಿ ಸಾರಾಯಿ ದಂಧೆ ನಡೆಯುತ್ತಿದೆ. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ" ಎಂದು ಹೇಳಿದ್ದಾರೆ.
More than 5,000 litres of illicit liquor was seized by the police in the wee hours of Tuesday. Acting on a tip-off that the liquor was being run in a hilly area near Sonatti village in Belagavi taluk, the police launched an operation this morning.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm