ಬ್ರೇಕಿಂಗ್ ನ್ಯೂಸ್
24-02-24 05:21 pm HK News Desk ಕ್ರೈಂ
ಬೆಳಗಾವಿ, ಫೆ.24: ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್ಗೂ ಹೆಚ್ಚು ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಈ ಕಳ್ಳಭಟ್ಟಿ ಸಾರಾಯಿ ಅಡ್ಡೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದರು.
ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಯ ತಂಡದಿಂದ ಕಾರ್ಯಾಚರಣೆ ನಡೆದಿದ್ದು, ಕಳ್ಳಭಟ್ಟಿ ಸಂಗ್ರಹಿಸಿದ್ದ ಮನೆಯ ಮೇಲೆ ದಾಳಿ ಮಾಡಲಾಗಿದೆ. ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ದಾಳಿ ವೇಳೆ 200 ಲೀಟರ್ ಕಳ್ಳಭಟ್ಟಿ ಇರುವ 26 ಬ್ಯಾರಲ್, 30 ಲೀಟರ್ ಕಳ್ಳಭಟ್ಟಿ ಇರುವ 17 ಬ್ಯಾರಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದಾಜು 12 ಲಕ್ಷ ರೂ. ಮೌಲ್ಯದ ಕಳ್ಳಭಟ್ಟಿ ಸಾರಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ, "ಒಟ್ಟು 5700 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದಿದ್ದೇವೆ. ಕೆಲವು ಮನೆಗಳ ಮೇಲೂ ದಾಳಿ ಮಾಡಿ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಒಂದು ವಾರದ ಹಿಂದೆ ಬಂದ ಮಾಹಿತಿ ಆಧರಿಸಿ ಇಂದು ಕಾರ್ಯಾಚರಣೆ ನಡೆಸಿದ್ದೇವೆ. ಪೊಲೀಸರು ಬಂದ ತಕ್ಷಣ ಎಲ್ಲರೂ ಓಡಿ ಹೋಗಿದ್ದಾರೆ. ಒಬ್ಬ ಆರೋಪಿ ಮಾತ್ರ ಸಿಕ್ಕಿ ಬಿದ್ದಿದ್ದಾನೆ. ಕೆಲವು ದಿನಗಳಿಂದ ಇಲ್ಲಿ ಕಳ್ಳಭಟ್ಟಿ ಸಾರಾಯಿ ದಂಧೆ ನಡೆಯುತ್ತಿದೆ. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ" ಎಂದು ಹೇಳಿದ್ದಾರೆ.
More than 5,000 litres of illicit liquor was seized by the police in the wee hours of Tuesday. Acting on a tip-off that the liquor was being run in a hilly area near Sonatti village in Belagavi taluk, the police launched an operation this morning.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am