ಬ್ರೇಕಿಂಗ್ ನ್ಯೂಸ್
25-11-20 04:10 pm Mangalore Correspondent ಕ್ರೈಂ
ಮಂಗಳೂರು, ನ.25: ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು, ಫೋಟೊ ವಿನಿಮಯ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿರಾಜ್ ಎಂಬ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿಗಳು ಕೆಪಿಟಿ ಬಳಿಯ ನಿವಾಸಿ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯ ಧ್ವನಿಯಲ್ಲಿ ಕರೆ ಮಾಡಿದ ಆರೋಪಿಗಳು, ಅಶ್ಲೀಲ ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಬಳಿಯಿಂದ ಹಣ ಪೀಕಿಸಿದ್ದಾರೆ. ಆಬಳಿಕ ಫೋಟೊ ಮುಂದಿಟ್ಟು ಬ್ಲಾಕ್ ಮೇಲ್ ಆರಂಭಿಸಿದ್ದ ಆರೋಪಿಗಳು ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ರಾಜೇಶ್ ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು, ಇದೀಗ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Two youths from Bangalore have been arrested for Blackmailing and Extortion by Kadri Cyber Crime Police in Mangalore. The arrested are identified as Gokul Raj and Pawan.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm