ಬ್ರೇಕಿಂಗ್ ನ್ಯೂಸ್
26-02-24 12:19 pm Bangalore Correspondent ಕ್ರೈಂ
ಬೆಂಗಳೂರು, ಫೆ 26: ಒಂಟಿಯಾಗಿ ನೆಲೆಸಿದ್ದ ವೃದ್ಧೆಯ ಕೈ, ಕಾಲು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಶವವನ್ನು ಡ್ರಮ್ನಲ್ಲಿ ತುಂಬಿ ಬೀದಿಗೆ ಬಿಸಾಡಿ ಪರಾರಿಯಾಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಪರಿಚಯಸ್ಥರೇ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೆ.ಆರ್. ಪುರದ ನಿಸರ್ಗ ಲೇಔಟ್ ನಿವಾಸಿ ಸುಶೀಲಮ್ಮ (65) ಮೃತ ವೃದ್ಧೆ. ಈ ಸಂಬಂಧ ವೃದ್ಧೆಯ ಪರಿಚಿತ ದಿನೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಸರ್ಗ ಲೇಔಟ್ನ ಮನೆಗಳ ಓಣಿಯಲ್ಲಿ ಅನಾಥವಾಗಿ 10 ಲೀಟರ್ ಸಾಮರ್ಥ್ಯದ ಡ್ರಮ್ ಇಟ್ಟಿರುವುದನ್ನು ಗಮನಿಸಿದ ಸ್ಥಳೀಯರು, ಅದರ ಬಳಿ ಹೋಗಿ ನೋಡಿದಾಗ ಶವ ಪತ್ತೆಯಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಸುಶೀಲಮ್ಮ, 10 ವರ್ಷಗಳಿಂದ ನಿಸರ್ಗ ಲೇಔಟ್ನಲ್ಲಿ ನೆಲೆಸಿದ್ದರು. ವೃದ್ಧೆಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆಸ್ತಿ ಮಾರಾಟದಲ್ಲಿ ಬಂದ ಹಣದಲ್ಲಿ 8 ಲಕ್ಷ ರೂ.ಗೆ ಮನೆ ಬೋಗ್ಯಕ್ಕೆ ಪಡೆದು, ಮಕ್ಕಳಿಂದ ಪ್ರತ್ಯೇಕವಾಗಿ ಅಜ್ಜಿ ವಾಸವಾಗಿದ್ದರು.
ಅದೇ ಕಟ್ಟಡದಲ್ಲಿ ಅವರ ಕಿರಿಯ ಪುತ್ರಿ ಮತ್ತು ಸಮೀಪದಲ್ಲೇ ಮಗ ನೆಲೆಸಿದ್ದ. ಪುತ್ರ ಪ್ರತಿ ತಿಂಗಳು ತಾಯಿಗೆ 2-3 ಸಾವಿರ ರೂ. ನೀಡುತ್ತಿದ್ದರು. ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿದ್ದ ಸುಶೀಲಮ್ಮ, ಚುನಾವಣಾ ಪ್ರಚಾರ ಸಹ ನಡೆಸಿದ್ದರು. ಈ ವೇಳೆ ದಿನೇಶ್ ಎಂಬಾತನ ಪರಿಚಯವಾಗಿದ್ದು, ಆಗಾಗ್ಗೆ ಅಜ್ಜಿಗೆ ಮನೆಗೆ ಬಂದು ಹೋಗುತ್ತಿದ್ದ. ಈ ಹತ್ಯೆಗೆ ನಿಖರವಾಗಿ ಕಾರಣ ಗೊತ್ತಾಗಿಲ್ಲ.
ಹಣಕ್ಕಾಗಿ ದಿನೇಶ್ ಕೃತ್ಯ ಎಸಗಿರುವ ಶಂಕೆ ಇದೆ. ಮನೆಯಲ್ಲಿ ಅಜ್ಜಿ ಜೊತೆ ದಿನೇಶ್ ಮಾತನಾಡುತ್ತ ನಿಂತಿದ್ದ ದೃಶ್ಯವನ್ನು ಮೊಮ್ಮಗಳು ನೋಡಿದ್ದಳು. ಇದಾದ ಬಳಿಕ ಅಜ್ಜಿಯ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಪೊಲೀಸರು ದಿನೇಶ್ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತ, ವೈಟ್ಫೀಲ್ಡ್ ಡಿಸಿಪಿ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೆ.ಆರ್.ಪುರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
65 year old elderly woman murdered in Bangalore, body found inside drum. Police have taken 1 into custody and have been investigating the case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am