ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm