ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm