ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm