ಬ್ರೇಕಿಂಗ್ ನ್ಯೂಸ್
27-02-24 06:18 pm Bangalore Correspondent ಕ್ರೈಂ
ಬೆಂಗಳೂರು, ಫೆ 27: ಡ್ರಗ್ ಪೆಡ್ಲರ್ಗಳ ವಿರುದ್ಧ ಸಿಸಿಬಿbಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸೋಲದೇವನಹಳ್ಳಿ ಮತ್ತು ಆರ್ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ವಿದೇಶಿ ಮೂಲದ ಡ್ರಗ್ ಪೆಡ್ಲರ್ಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಘಾನಾ ಮೂಲದ ಇಮ್ಯಾನ್ಯುಲ್ ಕ್ವಾಸಿ (32), ನೈಜೀರಿಯಾ ಮೂಲದ ಚೈನಸಾ ಸಿಪ್ರಿಲಾನ್ ಒಕೋಯ್ (38) ಹಾಗೂ ಕಲು ಚುಕ್ವಾ (40) ಎಂಬಾತನ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 2.35 ಕೋಟಿ ಮೌಲ್ಯದ 730 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 1273 ಎಕ್ಸ್ಟಸಿ ಪಿಲ್ಸ್, 42 ಗ್ರಾಂ ಹೈಡೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಬಂಧಿತ ಆರೋಪಿಗಳು ಪ್ರವಾಸಿ ವೀಸಾ, ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದು, ಪರಿಚಯಸ್ಥ ಗಿರಾಕಿಗಳಿಗೆ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಈ ಪೈಕಿ ಓರ್ವ ಆರೋಪಿಯು ಈ ಹಿಂದೆ ಮುಂಬೈನಲ್ಲಿ ನೆಲೆಸಿದ್ದು, ಮಾದಕ ಪದಾರ್ಥಗಳ ಮಾರಾಟ ಪ್ರಕರಣದಲ್ಲಿ ಸೆರೆವಾಸ ಸಹ ಅನುಭವಿಸಿದ್ದ ಎಂದು ತಿಳಿದು ಬಂದಿದೆ.
ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿಯು ಸ್ಥಳೀಯನಾಗಿದ್ದು, ಪೋಸ್ಟ್ ಮೂಲಕ ಹೈಡೋಗಾಂಜಾವನ್ನು ತರಿಸಿಕೊಳ್ಳುತ್ತಿದ್ದನು. ಆರೋಪಿಯ ಕುರಿತು ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದೇಶಿ ಮೂಲದವರ ಸಹಿತ 7 ಜನ ಡ್ರಗ್ ಪೆಡ್ಲರ್ಗಳ ಸೆರೆ : ಕಳೆದ ತಿಂಗಳು ಜನವರಿ 30 ರಂದು ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಸರಬರಾಜಿನಲ್ಲಿ ತೊಡಗಿದ್ದ ವಿದೇಶಿ ಮೂಲದವರ ಸಹಿತ 7 ಜನ ಆರೋಪಿಗಳನ್ನ ಸಿಸಿಬಿಯ ಮಾದಕ ವಸ್ತು ನಿಗ್ರಹದಳದ ಪೊಲೀಸರು ಬಂಧಿಸಿದ್ದರು. ನಗರದ ಜ್ಞಾನಭಾರತಿ, ಬಾಣಸವಾಡಿ, ಹುಳಿಮಾವು, ಪುಲಿಕೇಶಿನಗರ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಶೇಕ್ ಮೊಹಮ್ಮದ್ ಅರ್ಬಾಜ್, ಗೌತಮ್, ಕೆ. ಅಭಿಷೇಕ್, ಎನ್ ಜಾಧವ್, ರಿತಿಕ್ ರಾಜ್ ಎಂಬಾತನ ಸಹಿತ 7 ಜನ ಆರೋಪಿಗಳನ್ನು ಸೆರೆ ಹಿಡಿದಿದ್ದರು.
ಬಂಧಿತ ಆರೋಪಿಗಳಿಂದ 219 ಎಕ್ಸ್ಟಸಿ ಪಿಲ್ಸ್, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 130 ಗ್ರಾಂ ಚರಸ್, 100.88 ಗ್ರಾಂ ಕೊಕೇನ್ ಸಹಿತ 1.52 ಕೋಟಿ ಮೌಲ್ಯದ ಮಾದಕ ಪದಾರ್ಥಗಳು, 1 ದ್ವಿಚಕ್ರ ವಾಹನ, 6 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಮಾಹಿತಿ ನೀಡಿದ್ದರು.
The CCB police have launched a massive crackdown against drug peddlers. A total of four accused, including three foreign-based drug peddlers, have been arrested in Soladevanahalli and RMC Yard police station limits.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 02:49 pm
Mangalore Correspondent
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm