ಬ್ರೇಕಿಂಗ್ ನ್ಯೂಸ್
04-03-24 11:43 am Mangalore Correspondent ಕ್ರೈಂ
ಪುತ್ತೂರು, ಮಾ.4: ಕಾಲೇಜು ಆವರಣದಲ್ಲಿ ಕುಳಿತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿನಿ ಅಲೀನಾ ಸಿಬಿ, ಅರ್ಚನಾ, ಅಮೃತ ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರು. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕ ಆ್ಯಸಿಡ್ ಎರಚಿದ್ದಾನೆ. ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.



ಕೂಡಲೇ ವಿದ್ಯಾರ್ಥಿನಿಯರನ್ನು ಕಡಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಳಿಕ ಸ್ಥಳೀಯರು ಸೇರಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.
Three Pre-University students were attacked with acid on Monday when they were inside their college in Kadaba of Dakshina Kannada district. The students are being treated at the local hospital and will shifted to Mangaluru for further treatment. The police have arrested the accused.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm