ಬ್ರೇಕಿಂಗ್ ನ್ಯೂಸ್
04-03-24 11:43 am Mangalore Correspondent ಕ್ರೈಂ
ಪುತ್ತೂರು, ಮಾ.4: ಕಾಲೇಜು ಆವರಣದಲ್ಲಿ ಕುಳಿತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿನಿ ಅಲೀನಾ ಸಿಬಿ, ಅರ್ಚನಾ, ಅಮೃತ ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರು. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕ ಆ್ಯಸಿಡ್ ಎರಚಿದ್ದಾನೆ. ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.
ಕೂಡಲೇ ವಿದ್ಯಾರ್ಥಿನಿಯರನ್ನು ಕಡಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಳಿಕ ಸ್ಥಳೀಯರು ಸೇರಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.
Three Pre-University students were attacked with acid on Monday when they were inside their college in Kadaba of Dakshina Kannada district. The students are being treated at the local hospital and will shifted to Mangaluru for further treatment. The police have arrested the accused.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm