ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm