ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm