ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm