ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm