ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm