ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm