ಬ್ರೇಕಿಂಗ್ ನ್ಯೂಸ್
11-03-24 03:53 pm Mangaluru Correspondent ಕ್ರೈಂ
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.




ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
Video;
#Mangalore daughter-in-law #assaults father-in-law with a walking stick; video goes viral; KEB officer #Umashankari has been arrested by Mangalore #Police after the video went viral on social media. #BreakingNews #daughter pic.twitter.com/T82lhr7m0V
— Headline Karnataka (@hknewsonline) March 11, 2024
Mangalore daughter-in-law assaults father-in-law with a walking stick; video goes viral; KEB officer Umashankari has been arrested after the video went viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm