ಬ್ರೇಕಿಂಗ್ ನ್ಯೂಸ್
14-03-24 04:04 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಅಂದಾ ರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಂದು ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ನಾಲ್ವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಪಿಸ್ತೂಲು ತೋರಿಸಿ ಹದರಿಸಿದ್ದಾರೆ. ಆಗಲೂ ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸುತ್ತಲಿದ್ದ ಜನರು ಓಡಿಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುವೆಲ್ಲರಿಯ ಸಿಸಿಟಿವಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
At least two people were injured after two bike-borne miscreants opened fire in Bengaluru's Kodigehalli area on Thursday. The incident took place earlier today at 11 am, when two bike-borne miscreants tried to rob a jewellery store, Laxmi jewellers, in Devinagar.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am