ಬ್ರೇಕಿಂಗ್ ನ್ಯೂಸ್
14-03-24 04:04 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಅಂದಾ ರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಂದು ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ನಾಲ್ವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಪಿಸ್ತೂಲು ತೋರಿಸಿ ಹದರಿಸಿದ್ದಾರೆ. ಆಗಲೂ ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸುತ್ತಲಿದ್ದ ಜನರು ಓಡಿಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುವೆಲ್ಲರಿಯ ಸಿಸಿಟಿವಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
At least two people were injured after two bike-borne miscreants opened fire in Bengaluru's Kodigehalli area on Thursday. The incident took place earlier today at 11 am, when two bike-borne miscreants tried to rob a jewellery store, Laxmi jewellers, in Devinagar.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm