ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm