ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm