ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am