ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm