ಬ್ರೇಕಿಂಗ್ ನ್ಯೂಸ್
20-03-24 06:31 pm Mangalore Correspondent ಕ್ರೈಂ
ಉಳ್ಳಾಲ, ಮಾ.20: ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಪಡಿಸಿಕೊಂಡಿದ್ದಾರೆ.
ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ದಿನನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್ ಆಲಿ ಎಂಬವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು. ದಾಸ್ತಾನು ಇರಿಸಿದ್ದ ಮರಳನ್ನು ಮಧ್ಯರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಬಟ್ಟಪ್ಪಾಡಿಯಲ್ಲಿ ನಡೆಯುತ್ತಿದ್ದ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಸುಖೇಶ್ ಉಚ್ಚಿಲ್ ಮತ್ತು ರಂಜಿತ್ ಬಟ್ಟಪ್ಪಾಡಿ ಅವರು ಸ್ಥಳೀಯ ಪೊಲೀಸರಿಗೆ ಪದೇ ಪದೇ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ.



ಎಗ್ಗಿಲ್ಲದೆ ಮುಂದುವರೆದಿದ್ದ ಅಕ್ರಮ ಮರಳುಗಾರಿಕೆಯ ಬಗ್ಗೆ ಸುಖೇಶ್ ಮತ್ತು ರಂಜಿತ್ ಅವರು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೇ ಮಂಗಳವಾರ ಕರೆ ಮಾಡಿ ತಿಳಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಸಿಬಿ ಪೊಲೀಸರನ್ನೊಳಗೊಂಡ ತಂಡವು ಬುಧವಾರ ಬೆಳ್ಳಂಬೆಳಗ್ಗೆ ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿದ್ದು ನಂತರ ಉಳ್ಳಾಲ ಪೊಲೀಸರಿಗೂ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಕುಂಜತ್ತೂರಿನ ಜಯರಾಮ್ ಶೆಟ್ಟಿ, ಇಬ್ರಾಹಿಂ ಕೋಟೆಪುರ, ವಿನೋದ್ ಉಚ್ಚಿಲ್ ಯಾನೆ ಹನಿ ಹಿಂದುಸ್ಥಾನಿ, ಚಂದ್ರ ಸೋಮೇಶ್ವರ ಮತ್ತು ಸುನಿಲ್ ತಲೆಮರೆಸಿಕೊಂಡಿದ್ದಾರೆ. ವಶ ಪಡಿಸಿಕೊಳ್ಳಲಾದ ಅಪಾರ ಪ್ರಮಾಣದ ಮರಳು ಮತ್ತು ನಾಡ ದೋಣಿಗಳನ್ನು ಪೊಲೀಸರು ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿರಿಗಳಿಗೆ ಹಸ್ತಾಂತರಿಸಿದ್ದಾರೆ.
ಅಕ್ರಮ ಮರಳನ್ನು ದಾಸ್ತಾನು ಇರಿಸಿ ಮರಳು ಮಾಫಿಯಾಗಳನ್ನು ಬೆಂಬಲಿಸುತ್ತಿದ್ದ ಮಹಮ್ಮದ್ ಆಲಿ ಅವರ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸುಖೇಶ್ ಉಚ್ಚಿಲ್ ಅವರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
Mangalore Uchila illegal sand mining centre raid by CCB Police, four boats, sand seized.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm