ಬ್ರೇಕಿಂಗ್ ನ್ಯೂಸ್
21-03-24 07:32 pm HK News Desk ಕ್ರೈಂ
ಮಂಡ್ಯ, ಮಾ 21: ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಮಹಿಳೆ ಮತ್ತು ಎರಡೂವರೆ ವರ್ಷದ ಮಗುವೊಂದನ್ನು ದುಷ್ಕರ್ಮಿಗಳು ತುಂಡರಿಸಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ಜಯಮ್ಮ (46), ಅವರ ಎರಡೂವರೆ ವರ್ಷದ ಮೊಮ್ಮಗಳು ರಿಷಿಕಾ ಕೊಲೆಯಾದವರು. ಜಯಮ್ಮ ಮಾ.12ರಂದು ಆದಿಚುಂಚನಗಿರಿಯ ವ್ಯಕ್ತಿಯೊಬ್ಬರು ತನಗೆ ಹಣ ನೀಡಬೇಕಾಗಿದ್ದು, ಅವರಿಂದ ಹಣ ಪಡೆದು ಬರುವುದಾಗಿ ತಿಳಿಸಿ ಮನೆಯಿಂದ ಮೊಮ್ಮಗಳ ಜತೆ ಬಂದಿದ್ದರು. ನಂತರ ಮಾ.18ರ ವರೆಗೂ ಮನೆಗೆ ಹಿಂದಿರುಗಿರಲಿಲ್ಲ. ಜಯಮ್ಮ ಅವರ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿತ್ತು. ಹೀಗಾಗಿ, ಜಯಮ್ಮ ಅವರ ಪುತ್ರ ಪ್ರವೀಣ್ ಅವರು ತಾಯಿ ಮತ್ತು ತನ್ನ ಪುತ್ರಿ ಕಾಣೆಯಾಗಿರುವುದಾಗಿ ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಾ.18ರಂದು ಮಧ್ಯಾಹ್ನ ಪ್ರವೀಣ್ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಆದಿಚುಂಚನಗಿರಿ ಕಲ್ಯಾಣಿ ಬಳಿ ಇರುವ ಕೆರೆಗೆ ಬಿಸಾಕಿರುವುದಾಗಿ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಪ್ರವೀಣ್ ಪೊಲೀಸರ ನೆರವಿನೊಂದಿಗೆ ಕೆರೆಗೆ ಬಂದು ಹುಡುಕಿದಾಗ ಚೀಲದಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದವು. ಮುಖದ ಗುರುತು ಸಿಗದಂತೆ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಲಾಗಿದೆ.
ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಎಎಸ್ಪಿ ತಿಮ್ಮಯ್ಯ, ಸಿಪಿಐ ಬಿ.ಆರ್. ಗೌಡ ಪರಿಶೀಲನೆ ನಡೆಸಿದರು. ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mandya body of two year old grand daughter and grand mother found in Lake. The body has been cut into pieces and thrown into the lake.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm