ಬ್ರೇಕಿಂಗ್ ನ್ಯೂಸ್
21-03-24 07:32 pm HK News Desk ಕ್ರೈಂ
ಮಂಡ್ಯ, ಮಾ 21: ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಮಹಿಳೆ ಮತ್ತು ಎರಡೂವರೆ ವರ್ಷದ ಮಗುವೊಂದನ್ನು ದುಷ್ಕರ್ಮಿಗಳು ತುಂಡರಿಸಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ಜಯಮ್ಮ (46), ಅವರ ಎರಡೂವರೆ ವರ್ಷದ ಮೊಮ್ಮಗಳು ರಿಷಿಕಾ ಕೊಲೆಯಾದವರು. ಜಯಮ್ಮ ಮಾ.12ರಂದು ಆದಿಚುಂಚನಗಿರಿಯ ವ್ಯಕ್ತಿಯೊಬ್ಬರು ತನಗೆ ಹಣ ನೀಡಬೇಕಾಗಿದ್ದು, ಅವರಿಂದ ಹಣ ಪಡೆದು ಬರುವುದಾಗಿ ತಿಳಿಸಿ ಮನೆಯಿಂದ ಮೊಮ್ಮಗಳ ಜತೆ ಬಂದಿದ್ದರು. ನಂತರ ಮಾ.18ರ ವರೆಗೂ ಮನೆಗೆ ಹಿಂದಿರುಗಿರಲಿಲ್ಲ. ಜಯಮ್ಮ ಅವರ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿತ್ತು. ಹೀಗಾಗಿ, ಜಯಮ್ಮ ಅವರ ಪುತ್ರ ಪ್ರವೀಣ್ ಅವರು ತಾಯಿ ಮತ್ತು ತನ್ನ ಪುತ್ರಿ ಕಾಣೆಯಾಗಿರುವುದಾಗಿ ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಾ.18ರಂದು ಮಧ್ಯಾಹ್ನ ಪ್ರವೀಣ್ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಆದಿಚುಂಚನಗಿರಿ ಕಲ್ಯಾಣಿ ಬಳಿ ಇರುವ ಕೆರೆಗೆ ಬಿಸಾಕಿರುವುದಾಗಿ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಪ್ರವೀಣ್ ಪೊಲೀಸರ ನೆರವಿನೊಂದಿಗೆ ಕೆರೆಗೆ ಬಂದು ಹುಡುಕಿದಾಗ ಚೀಲದಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದವು. ಮುಖದ ಗುರುತು ಸಿಗದಂತೆ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಲಾಗಿದೆ.
ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಎಎಸ್ಪಿ ತಿಮ್ಮಯ್ಯ, ಸಿಪಿಐ ಬಿ.ಆರ್. ಗೌಡ ಪರಿಶೀಲನೆ ನಡೆಸಿದರು. ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mandya body of two year old grand daughter and grand mother found in Lake. The body has been cut into pieces and thrown into the lake.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm