ಬ್ರೇಕಿಂಗ್ ನ್ಯೂಸ್
21-03-24 07:32 pm HK News Desk ಕ್ರೈಂ
ಮಂಡ್ಯ, ಮಾ 21: ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಮಹಿಳೆ ಮತ್ತು ಎರಡೂವರೆ ವರ್ಷದ ಮಗುವೊಂದನ್ನು ದುಷ್ಕರ್ಮಿಗಳು ತುಂಡರಿಸಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ಜಯಮ್ಮ (46), ಅವರ ಎರಡೂವರೆ ವರ್ಷದ ಮೊಮ್ಮಗಳು ರಿಷಿಕಾ ಕೊಲೆಯಾದವರು. ಜಯಮ್ಮ ಮಾ.12ರಂದು ಆದಿಚುಂಚನಗಿರಿಯ ವ್ಯಕ್ತಿಯೊಬ್ಬರು ತನಗೆ ಹಣ ನೀಡಬೇಕಾಗಿದ್ದು, ಅವರಿಂದ ಹಣ ಪಡೆದು ಬರುವುದಾಗಿ ತಿಳಿಸಿ ಮನೆಯಿಂದ ಮೊಮ್ಮಗಳ ಜತೆ ಬಂದಿದ್ದರು. ನಂತರ ಮಾ.18ರ ವರೆಗೂ ಮನೆಗೆ ಹಿಂದಿರುಗಿರಲಿಲ್ಲ. ಜಯಮ್ಮ ಅವರ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿತ್ತು. ಹೀಗಾಗಿ, ಜಯಮ್ಮ ಅವರ ಪುತ್ರ ಪ್ರವೀಣ್ ಅವರು ತಾಯಿ ಮತ್ತು ತನ್ನ ಪುತ್ರಿ ಕಾಣೆಯಾಗಿರುವುದಾಗಿ ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಾ.18ರಂದು ಮಧ್ಯಾಹ್ನ ಪ್ರವೀಣ್ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಆದಿಚುಂಚನಗಿರಿ ಕಲ್ಯಾಣಿ ಬಳಿ ಇರುವ ಕೆರೆಗೆ ಬಿಸಾಕಿರುವುದಾಗಿ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಪ್ರವೀಣ್ ಪೊಲೀಸರ ನೆರವಿನೊಂದಿಗೆ ಕೆರೆಗೆ ಬಂದು ಹುಡುಕಿದಾಗ ಚೀಲದಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದವು. ಮುಖದ ಗುರುತು ಸಿಗದಂತೆ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಲಾಗಿದೆ.
ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಎಎಸ್ಪಿ ತಿಮ್ಮಯ್ಯ, ಸಿಪಿಐ ಬಿ.ಆರ್. ಗೌಡ ಪರಿಶೀಲನೆ ನಡೆಸಿದರು. ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mandya body of two year old grand daughter and grand mother found in Lake. The body has been cut into pieces and thrown into the lake.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm