ಬ್ರೇಕಿಂಗ್ ನ್ಯೂಸ್
21-03-24 08:04 pm HK News Desk ಕ್ರೈಂ
ರಾಯಚೂರು, ಮಾ 21: ಮದುವೆ ಆಗಿದ್ದರೂ ಮತ್ತೊಬ್ಬನ ಮೋಹಿಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದಾಳೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯನೊರ್ವ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ರಾಜು ನಾಯ್ಕ್ (38) ಕೊಲೆಯಾದವರು. ಸ್ನೇಹಾ ಕೊಲೆ ಆರೋಪಿ ಆಗಿದ್ದಾಳೆ. ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ ರಾಜುಗೆ ತಿಳಿದುಹೋಯಿತು.

ಹೆಂಡತಿ ವಿಷಯ ಊರವರಿಗೆ ತಿಳಿದರೆ ಮಾನ ಮಾರ್ಯಾದೆ ಹೋಗುತ್ತೆ ಎಂದು ರಾಜು, ತನ್ನ ಪತ್ನಿ ಸ್ನೇಹಾಗೆ ಬುದ್ಧಿವಾದ ಹೇಳಿದ್ದ. ಆದರೂ ಸ್ನೇಹಾ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಕಳೆದ 2 ವರ್ಷಗಳಿಂದ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ದಂಪತಿ ಮಧ್ಯೆ ಇದೇ ವಿಷಯಕ್ಕೆ ಜಗಳ ನಡೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸ್ನೇಹಾ ಆತನನ್ನು ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದಳು. ಪತಿಗಿದ್ದ ಕುಡಿತವನ್ನೇ ಬಂಡವಾಳ ಮಾಡಿಕೊಂಡ ಸ್ನೇಹ, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದನ್ನೂ ಕುಡಿಯುತ್ತಿದ್ದಂತೆ ರಾಜು ನಿದ್ರೆಗೆ ಜಾರಿದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಾಳನ್ನು ವಶಕ್ಕೆ ಪಡೆದಿರುವ ಯಾಪಲದಿನ್ನಿ ಪೊಲೀಸರು, ಈ ಸಂಬಂಧ ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Raichur wife kills husband over her illicit affair. The deceased has been identified as Raju Naik. Since two years wife was in affair with a construction worker who had come from Maharashtra to Raichur.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm