ಬ್ರೇಕಿಂಗ್ ನ್ಯೂಸ್
21-03-24 08:04 pm HK News Desk ಕ್ರೈಂ
ರಾಯಚೂರು, ಮಾ 21: ಮದುವೆ ಆಗಿದ್ದರೂ ಮತ್ತೊಬ್ಬನ ಮೋಹಿಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದಾಳೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯನೊರ್ವ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ರಾಜು ನಾಯ್ಕ್ (38) ಕೊಲೆಯಾದವರು. ಸ್ನೇಹಾ ಕೊಲೆ ಆರೋಪಿ ಆಗಿದ್ದಾಳೆ. ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ ರಾಜುಗೆ ತಿಳಿದುಹೋಯಿತು.

ಹೆಂಡತಿ ವಿಷಯ ಊರವರಿಗೆ ತಿಳಿದರೆ ಮಾನ ಮಾರ್ಯಾದೆ ಹೋಗುತ್ತೆ ಎಂದು ರಾಜು, ತನ್ನ ಪತ್ನಿ ಸ್ನೇಹಾಗೆ ಬುದ್ಧಿವಾದ ಹೇಳಿದ್ದ. ಆದರೂ ಸ್ನೇಹಾ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಕಳೆದ 2 ವರ್ಷಗಳಿಂದ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ದಂಪತಿ ಮಧ್ಯೆ ಇದೇ ವಿಷಯಕ್ಕೆ ಜಗಳ ನಡೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸ್ನೇಹಾ ಆತನನ್ನು ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದಳು. ಪತಿಗಿದ್ದ ಕುಡಿತವನ್ನೇ ಬಂಡವಾಳ ಮಾಡಿಕೊಂಡ ಸ್ನೇಹ, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದನ್ನೂ ಕುಡಿಯುತ್ತಿದ್ದಂತೆ ರಾಜು ನಿದ್ರೆಗೆ ಜಾರಿದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಾಳನ್ನು ವಶಕ್ಕೆ ಪಡೆದಿರುವ ಯಾಪಲದಿನ್ನಿ ಪೊಲೀಸರು, ಈ ಸಂಬಂಧ ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Raichur wife kills husband over her illicit affair. The deceased has been identified as Raju Naik. Since two years wife was in affair with a construction worker who had come from Maharashtra to Raichur.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm