ಬ್ರೇಕಿಂಗ್ ನ್ಯೂಸ್
21-03-24 10:43 pm Mangalore Correspondent ಕ್ರೈಂ
ಮಂಗಳೂರು, ಮಾ.21: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿದ್ದು ಅಲ್ಲಿನ ಯುವಕನನ್ನು ಪ್ರಶ್ನೆ ಮಾಡಿದ್ದಾರೆ.


ತಡರಾತ್ರಿಯಲ್ಲಿ ಪಾಲ್ದಾನೆ ಎಂಬಲ್ಲಿ ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಹೊಡೆದಾಟದ ವಿಡಿಯೋವನ್ನು ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಒದೆ ತಿಂದ ಯುವಕನ ಮುಖ ರಕ್ತಸಿಕ್ತವಾಗಿತ್ತು.
ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂಬ ಮಾಹಿತಿಯಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಹಲ್ಲೆ ನಡೆಸಿದ ಯುವಕ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಯಾಗಿದ್ದು, ಈ ಹಿಂದೆಯೂ ಕಾಲೇಜಿನಲ್ಲಿ ಗಲಾಟೆ ಮಾಡಿ ಕಿರಿಕ್ ಮಾಡಿದ್ದ. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.
Video of neermarga youth brutally assaulted by youth from Bajjodi in Mangalore goes viral over the issue of girl. Youth from neermarga paldane was dragged from his house and was brutally assaulted by a youth over matter of girl. The video of this has gone viral on social media. No case has been registered so far at Kankandy rural police station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am