ಬ್ರೇಕಿಂಗ್ ನ್ಯೂಸ್
21-03-24 10:43 pm Mangalore Correspondent ಕ್ರೈಂ
ಮಂಗಳೂರು, ಮಾ.21: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿದ್ದು ಅಲ್ಲಿನ ಯುವಕನನ್ನು ಪ್ರಶ್ನೆ ಮಾಡಿದ್ದಾರೆ.


ತಡರಾತ್ರಿಯಲ್ಲಿ ಪಾಲ್ದಾನೆ ಎಂಬಲ್ಲಿ ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಹೊಡೆದಾಟದ ವಿಡಿಯೋವನ್ನು ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಒದೆ ತಿಂದ ಯುವಕನ ಮುಖ ರಕ್ತಸಿಕ್ತವಾಗಿತ್ತು.
ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂಬ ಮಾಹಿತಿಯಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಹಲ್ಲೆ ನಡೆಸಿದ ಯುವಕ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಯಾಗಿದ್ದು, ಈ ಹಿಂದೆಯೂ ಕಾಲೇಜಿನಲ್ಲಿ ಗಲಾಟೆ ಮಾಡಿ ಕಿರಿಕ್ ಮಾಡಿದ್ದ. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.
Video of neermarga youth brutally assaulted by youth from Bajjodi in Mangalore goes viral over the issue of girl. Youth from neermarga paldane was dragged from his house and was brutally assaulted by a youth over matter of girl. The video of this has gone viral on social media. No case has been registered so far at Kankandy rural police station.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm