ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm