ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm