ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm