ಬ್ರೇಕಿಂಗ್ ನ್ಯೂಸ್
23-03-24 05:38 pm Bangalore Correspondent ಕ್ರೈಂ
ಬೆಂಗಳೂರು, ಮಾ.23: ತುಮಕೂರಿನ ಕುಚ್ಚಂಗಿ ಕೆರೆ ಸಮೀಪ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಾರು ಮತ್ತು ಮೂವರ ಶವಗಳ ಬೆನ್ನುಹತ್ತಿದ ಪೊಲೀಸರು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೆ, ಒಟ್ಟು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಬಂಗಾರದ ಆಸೆಗೆ ಬಿದ್ದು ಹೋದವರು ಹಂತಕರ ಕೈಗೆ ಸಿಲುಕಿ ಸಾವು ಕಂಡಿದ್ದಾರೆ ಎನ್ನಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಇಸಾಕ್ (56), ಸಾಹುಲ್ (45), ಇಮ್ಮಿಯಾಜ್ (34) ಮೃತರಾಗಿದ್ದು ಬಂಗಾರದ ಆಸೆಗೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಇಸಾಕ್ ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದರೆ, ಸಾಹುಲ್ ಹಮೀದ್ ಆಟೋ ಚಾಲಕ ಹಾಗೂ ಇಮ್ತಿಯಾಜ್ ಸಿದ್ದಿಕ್ ಫೂಟ್ ವೇರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ಇಸಾಕ್ಗೆ ತುಮಕೂರಿನ ಪರಿಚಿತರೊಬ್ಬರಿಂದ ಫೋನ್ ಕರೆ ಬಂದಿತ್ತು. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ. ಕಡಿಮೆ ಬೆಲೆಗೆ ಎಲ್ಲ ಚಿನ್ನವನ್ನು ಕೊಡುತ್ತೇವೆ ಎಂದು ಹೇಳಿದ್ದರು. ಚಿನ್ನದಾಸೆ ತೋರಿಸಿ ಹಣವನ್ನು ದೋಚುವ ಪ್ಲ್ಯಾನ್ ಮಾಡಿದ್ದರು.
ಸಂಚಿನ ಬಗ್ಗೆ ತಿಳಿಯದೆ ಇಸಾಕ್ ತನ್ನ ಸ್ನೇಹಿತ ರಫೀಕನ ಎಸ್ ಪ್ರೆಸ್ಸೋ ಕಾರನ್ನು ಪಡೆದಿದ್ದ. ಅಲ್ಲದೆ, ಸ್ನೇಹಿತರಾದ ಹಮೀದ್ ಹಾಗೂ ಇಮ್ತಿಯಾಜ್ ಸಿದ್ದಿಕ್ಗೆ ಒಂದು ಡೀಲ್ ಇದೆ ಬನ್ನಿ ಎಂದು ಹೇಳಿ ಹಣದ ಚೀಲ ಒಟ್ಟು ಮಾಡಿ ತುಮಕೂರಿಗೆ ಹೋಗಿದ್ದ. ತುಮಕೂರಿನಲ್ಲಿ ಸ್ವಾಮಿ ಎಂಬಾತನ ಪರಿಚಯದಲ್ಲಿ ಇಸಾಕ್ ಬಂದಿದ್ದ.
ಹಂತಕರು ನಕಲಿ ಚಿನ್ನ ತೋರಿಸಿ, ಹಣ ದೋಚಲು ಮುಂದಾಗಿದ್ದರು. ಈ ಮೂವರನ್ನು ಜನರಿಲ್ಲದ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಕೈ ಕಾಲು ಕಟ್ಟಿ ಕೊಲೆ ಮಾಡಿದ್ದರು. ನಂತರ ಅದೇ ಕಾರಿನ ಡಿಕ್ಕಿಯಲ್ಲಿ ಇಬ್ಬರ ಮೃತದೇಹ ಹಾಗೂ ಕಾರಿನ ಮಧ್ಯಭಾಗದ ಸೀಟಿನಲ್ಲಿ ಮತ್ತೊಬ್ಬನ ಮೃತದೇಹ ಇಟ್ಟು ಕುಚ್ಚಂಗಿ ಕೆರೆಯ ಬಳಿ ತಂದಿರಿಸಿ ಕಾರಿಗೆ ಬೆಂಕಿ ಹಚ್ಚಿದ್ದರು. ಶವ ಸಹಿತ ಸುಟ್ಟು ಹೋದರೆ ಗುರುತು ಪತ್ತೆ ಸಾಧ್ಯವಾಗದು ಎಂಬ ಲೆಕ್ಕ ಹಾಕಿದ್ದರು.
ಆದರೆ ಕಾರಿನ ನಂಬರ್ ಆಧರಿಸಿ ಮಾಲೀಕನನ್ನು ಸಂಪರ್ಕಸಿದಾಗ, 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ತಿಳಿಸಿದ್ದ. ಇಸಾಕ್ ವಿಷಯ ತಿಳಿಯುತ್ತಲೇ ಮೂವರ ಗುರುತು ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧಿಸಿ ಪ್ರಮುಖ ಆರೋಪಿ ಸ್ವಾಮಿ ಸೇರಿ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ತಾಲೂಕಿನ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Car found in brunt condition at Tumkur case, trapped by fake gold and killed, police shocking details. Three charred bodies from Mangalore were found in a burnt car on a lake bed on the outskirts of this district headquarters town about 70 km from Bengaluru.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am