ಬ್ರೇಕಿಂಗ್ ನ್ಯೂಸ್
23-03-24 05:38 pm Bangalore Correspondent ಕ್ರೈಂ
ಬೆಂಗಳೂರು, ಮಾ.23: ತುಮಕೂರಿನ ಕುಚ್ಚಂಗಿ ಕೆರೆ ಸಮೀಪ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಾರು ಮತ್ತು ಮೂವರ ಶವಗಳ ಬೆನ್ನುಹತ್ತಿದ ಪೊಲೀಸರು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೆ, ಒಟ್ಟು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಬಂಗಾರದ ಆಸೆಗೆ ಬಿದ್ದು ಹೋದವರು ಹಂತಕರ ಕೈಗೆ ಸಿಲುಕಿ ಸಾವು ಕಂಡಿದ್ದಾರೆ ಎನ್ನಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಇಸಾಕ್ (56), ಸಾಹುಲ್ (45), ಇಮ್ಮಿಯಾಜ್ (34) ಮೃತರಾಗಿದ್ದು ಬಂಗಾರದ ಆಸೆಗೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಇಸಾಕ್ ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದರೆ, ಸಾಹುಲ್ ಹಮೀದ್ ಆಟೋ ಚಾಲಕ ಹಾಗೂ ಇಮ್ತಿಯಾಜ್ ಸಿದ್ದಿಕ್ ಫೂಟ್ ವೇರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ಇಸಾಕ್ಗೆ ತುಮಕೂರಿನ ಪರಿಚಿತರೊಬ್ಬರಿಂದ ಫೋನ್ ಕರೆ ಬಂದಿತ್ತು. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ. ಕಡಿಮೆ ಬೆಲೆಗೆ ಎಲ್ಲ ಚಿನ್ನವನ್ನು ಕೊಡುತ್ತೇವೆ ಎಂದು ಹೇಳಿದ್ದರು. ಚಿನ್ನದಾಸೆ ತೋರಿಸಿ ಹಣವನ್ನು ದೋಚುವ ಪ್ಲ್ಯಾನ್ ಮಾಡಿದ್ದರು.
ಸಂಚಿನ ಬಗ್ಗೆ ತಿಳಿಯದೆ ಇಸಾಕ್ ತನ್ನ ಸ್ನೇಹಿತ ರಫೀಕನ ಎಸ್ ಪ್ರೆಸ್ಸೋ ಕಾರನ್ನು ಪಡೆದಿದ್ದ. ಅಲ್ಲದೆ, ಸ್ನೇಹಿತರಾದ ಹಮೀದ್ ಹಾಗೂ ಇಮ್ತಿಯಾಜ್ ಸಿದ್ದಿಕ್ಗೆ ಒಂದು ಡೀಲ್ ಇದೆ ಬನ್ನಿ ಎಂದು ಹೇಳಿ ಹಣದ ಚೀಲ ಒಟ್ಟು ಮಾಡಿ ತುಮಕೂರಿಗೆ ಹೋಗಿದ್ದ. ತುಮಕೂರಿನಲ್ಲಿ ಸ್ವಾಮಿ ಎಂಬಾತನ ಪರಿಚಯದಲ್ಲಿ ಇಸಾಕ್ ಬಂದಿದ್ದ.
ಹಂತಕರು ನಕಲಿ ಚಿನ್ನ ತೋರಿಸಿ, ಹಣ ದೋಚಲು ಮುಂದಾಗಿದ್ದರು. ಈ ಮೂವರನ್ನು ಜನರಿಲ್ಲದ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಕೈ ಕಾಲು ಕಟ್ಟಿ ಕೊಲೆ ಮಾಡಿದ್ದರು. ನಂತರ ಅದೇ ಕಾರಿನ ಡಿಕ್ಕಿಯಲ್ಲಿ ಇಬ್ಬರ ಮೃತದೇಹ ಹಾಗೂ ಕಾರಿನ ಮಧ್ಯಭಾಗದ ಸೀಟಿನಲ್ಲಿ ಮತ್ತೊಬ್ಬನ ಮೃತದೇಹ ಇಟ್ಟು ಕುಚ್ಚಂಗಿ ಕೆರೆಯ ಬಳಿ ತಂದಿರಿಸಿ ಕಾರಿಗೆ ಬೆಂಕಿ ಹಚ್ಚಿದ್ದರು. ಶವ ಸಹಿತ ಸುಟ್ಟು ಹೋದರೆ ಗುರುತು ಪತ್ತೆ ಸಾಧ್ಯವಾಗದು ಎಂಬ ಲೆಕ್ಕ ಹಾಕಿದ್ದರು.
ಆದರೆ ಕಾರಿನ ನಂಬರ್ ಆಧರಿಸಿ ಮಾಲೀಕನನ್ನು ಸಂಪರ್ಕಸಿದಾಗ, 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ತಿಳಿಸಿದ್ದ. ಇಸಾಕ್ ವಿಷಯ ತಿಳಿಯುತ್ತಲೇ ಮೂವರ ಗುರುತು ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧಿಸಿ ಪ್ರಮುಖ ಆರೋಪಿ ಸ್ವಾಮಿ ಸೇರಿ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ತಾಲೂಕಿನ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Car found in brunt condition at Tumkur case, trapped by fake gold and killed, police shocking details. Three charred bodies from Mangalore were found in a burnt car on a lake bed on the outskirts of this district headquarters town about 70 km from Bengaluru.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm