ಬ್ರೇಕಿಂಗ್ ನ್ಯೂಸ್
29-03-24 05:09 pm Bangalore Correspondent ಕ್ರೈಂ
ಬೆಂಗಳೂರು, ಮಾ.29: ಕೋವಿಡ್ ಸಮಯದಲ್ಲಿ ಕೆಲಸ ಕಳಕೊಂಡಿದ್ದ ಐಟಿ ಉದ್ಯೋಗಿ ಯುವತಿಯೊಬ್ಬಳು ಲ್ಯಾಪ್ ಟಾಪ್ ಕಳವುಗೈಯುವುದನ್ನೇ ವೃತ್ತಿಯಾಗಿಸ್ಕೊಂಡು ನಾಲ್ಕು ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ದೆಹಲಿಯ ನೋಯ್ಡಾ ಮೂಲದ ಜೆಸ್ಸಿ ಅಗರ್ವಾಲ್ ಎಂಬ ಹೆಸರಿನ ಯುವತಿ ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿದ್ದಳು. ಕೋವಿಡ್ ಸಮಯದಲ್ಲಿ ಕಂಪನಿ ಉದ್ಯೋಗಿಗಳನ್ನು ಕಡಿತ ಮಾಡಿದ್ದರಿಂದ ಜೆಸ್ಸಿ ಕೆಲಸ ಕಳಕೊಂಡಿದ್ದಳು. ಬೆಂಗಳೂರಿನ ಪೇಯಿಂಗ್ ಗೆಸ್ಟ್ ನಲ್ಲಿ ಇರುತ್ತಿದ್ದ ಯುವತಿ ಅಲ್ಲಿಂದಲೇ ಚಾರ್ಜಿಂಗ್ ಹಾಕಿಡುತ್ತಿದ್ದ ಲ್ಯಾಪ್ ಟಾಪ್ ಗಳನ್ನು ಕದಿಯುತ್ತಿದ್ದಳು. ಬಳಿಕ ನೋಯ್ಡಾಕ್ಕೆ ಕೊಂಡೊಯ್ದು ಬ್ಲಾಕ್ ಮಾರ್ಕೆಟ್ ನಲ್ಲಿ ಮಾರುತ್ತಿದ್ದಳು.

ಇತ್ತೀಚೆಗೆ ಪಿಜಿಯಲ್ಲಿ ಲ್ಯಾಪ್ ಟಾಪ್ ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿದಾಗ ಹಲವಾರು ಲ್ಯಾಪ್ ಟಾಪ್ ಕಳವಾಗಿದೆ ಎಂಬ ಮಾಹಿತಿ ಸಿಕ್ಕಿತ್ತು. ಪೊಲೀಸರು ಅಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಯುವತಿಯೊಬ್ಬಳು ಅಲ್ಲಿಗೆ ಬಂದು ಹೋಗುತ್ತಿದ್ದುದು ದಾಖಲಾಗಿತ್ತು. ಇದೇ ಯುವತಿ ಬೇರೆ ಕಡೆ ಪಿಜಿಗಳಿಗೂ ಖಾಲಿ ಇರುತ್ತಿದ್ದಾಗ ಎಂಟ್ರಿ ಕೊಡುತ್ತಿದ್ದಳು. ಸ್ನಾನ ಮಾಡುತ್ತಿದ್ದಾಗಲೋ, ಹೊರಗೆಲ್ಲಾದರೂ ಹೋಗುತ್ತಿದ್ದ ವೇಳೆ ಚಾರ್ಜ್ ಹಾಕಿರುತ್ತಿದ್ದ ಲ್ಯಾಪ್ ಟಾಪ್, ಗಾಜೆಟ್ಸ್ ಗಳನ್ನು ಎಗರಿಸುತ್ತಿದ್ದಳು.
ಪೊಲೀಸರು ಮಾರ್ಚ್ 26ರಂದು ಯುವತಿಯನ್ನು ಬಂಧಿಸಿದ್ದು, ಆಕೆಯ ಬಳಿಯಿದ್ದ 10ರಿಂದ 15 ಲಕ್ಷ ಮೌಲ್ಯದ 24 ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದಾರೆ. ಆಕೆ ಇರುತ್ತಿದ್ದ ಏರಿಯಾದಲ್ಲಿ ಹಲವು ಕಡೆಗಳಲ್ಲಿ ಕಳವು ಮಾಡಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 26-year-old woman, a B.Tech graduate from Noida, was arrested by HAL police for allegedly stealing 24 laptops valued at ₹10 lakh from paying guest (PG) accommodations and software companies in Bengaluru. After an individual living in the PG complained about the lost valuables, the HAL police tracked down the accused using CCTV camera footage and other evidence. On March 26, they arrested Jassi Agarwal, a resident of Noida, as per reports.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm