ಬ್ರೇಕಿಂಗ್ ನ್ಯೂಸ್
30-03-24 10:53 am Mangalore Correspondent ಕ್ರೈಂ
ಪುತ್ತೂರು, ಮಾ.30: ಪುತ್ತೂರಿನ ವೈದ್ಯರೊಬ್ಬರಿಗೆ ದೆಹಲಿಯ ಪೊಲೀಸ್ ಎಂದು ಹೇಳಿ ಕರೆ ಮಾಡಿದ ವಂಚಕ ನಿಮ್ಮ ವಿರುದ್ಧ ಕೇಸು ದಾಖಲಾಗಿದೆ ಎಂದು ಬೆದರಿಸಿ 16.50 ಲಕ್ಷ ರೂ. ಪೀಕಿಸಿದ ಘಟನೆ ಬೆಳಕಿಗೆ ಬಂದಿದೆ.
ವಂಚನೆಗೀಡಾದ ಪುತ್ತೂರು ಬೊಳುವಾರು ನಿವಾಸಿ ಡಾ.ಚಿದಂಬರ ಅಡಿಗ (69) ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಇವರ ದೂರವಾಣಿಗೆ ಮಾ.28ರಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದಾಗಿ ತಿಳಿಸಿದ್ದ ವ್ಯಕ್ತಿ, ನಿಮ್ಮ ಮೇಲೆ ದೆಹಲಿಯಲ್ಲಿ ಮಾದಕ ವಸ್ತುವಿಗೆ ಸಂಬಂಧಿಸಿದಂತೆ ಹಾಗೂ ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದ್ದು, ಅರೆಸ್ಟ್ ಮಾಡಲು ಕೋರ್ಟಿನಿಂದ ವಾರಂಟ್ ಆಗಿದೆ. ನೀವು ದೆಹಲಿಯ ಸಿಬಿಐ ಕೋರ್ಟಿಗೆ ಹಾಜರಾಗಬೇಕು. ನಿಮಗೆ ಇಲ್ಲಿಗೆ ಬರಲು ಆಗದಿದ್ದರೆ ಈಗ ಆನ್ಲೈನ್ ಮೂಲಕ ಕೋರ್ಟ್ ಕೇಸ್ ನಡೆಸುತ್ತೇವೆ ಎಂದು ನಂಬಿಸಿದ್ದಾರೆ.
![]()

ಅದಕ್ಕಾಗಿ ನಿಮ್ಮ ಬ್ಯಾಂಕ್ ಖಾತೆಯಿಂದ ಒಂದಷ್ಟು ಹಣವನ್ನು ವರ್ಗಾವಣೆ ಮಾಡಬೇಕು. ನಿಮ್ಮ ಕೋರ್ಟ್ ಕೇಸ್ ಮುಗಿದ ಮೇಲೆ ನಿಮಗೆ ನಿಮ್ಮ ಹಣ ವಾಪಾಸು ಸಿಗುತ್ತದೆ. ಇಲ್ಲದಿದ್ದರೆ ನಿಮ್ಮ ಮನೆಗೆ ಬಂದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂಬುದಾಗಿ ಬೆದರಿಸಿದ್ದಾನೆ. ಅಲ್ಲದೆ, ವೈದ್ಯರ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಮೊಬೈಲ್ ಫೋನ್ ವಾಟ್ಸ್ ಆಪ್ ಗೆ ಕಳುಹಿಸಿದ್ದ. ಇದರಿಂದ ಹೆದರಿದ ವೈದ್ಯರು, ಗಾಬರಿಗೊಂಡು ತನ್ನ ಬ್ಯಾಂಕ್ ಖಾತೆಯಿಂದ, RTGS ಮೂಲಕ ಅಪರಿಚಿತ ವ್ಯಕ್ತಿ ತಿಳಿಸಿದ ಬ್ಯಾಂಕ್ ಖಾತೆಗೆ ರೂ. 16,50,000/- ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಸ್ವಲ್ಪ ಹೊತ್ತಿನ ಬಳಿಕ ಅದೇ ವ್ಯಕ್ತಿ ವೈದ್ಯರಿಗೆ ಕರೆ ಮಾಡಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆಗ ವೈದ್ಯರಿಗೆ ಅನುಮಾನ ಬಂದಿದ್ದು ದೂರವಾಣಿ ಕರೆ ಕಡಿತಗೊಳಿಸಿದ್ದಾರೆ, ತನ್ನ ಗೆಳೆಯರಿಗೆ ಈ ಬಗ್ಗೆ ತಿಳಿಸಿದಾಗ ಆನ್ ಲೈನ್ ವಂಚನೆಯ ಕೃತ್ಯದ ಬಗ್ಗೆ ತಿಳಿದುಬಂದಿತ್ತು. ಡಾ.ಚಿದಂಬರ ಅಡಿಗ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ ಕ್ರ ನಂ :32-2024 ಕಲಂ:406, 419, 420 ಐಪಿಸಿ ಮತ್ತು 66 ( C) ,66 ( D ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Puttur doctor duped of Rs 16 lakha online fraud in the name of Delhi CBI. he caller claimed to be a police officer from Delhi and informed Dr Adiga that there was a case registered against him in Delhi related to narcotics, illegal money hoarding, and human trafficking, with an active arrest warrant issued against him.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am