ಬ್ರೇಕಿಂಗ್ ನ್ಯೂಸ್
05-04-24 10:09 am HK News Desk ಕ್ರೈಂ
ಚಾಮರಾಜನಗರ, ಏ 04: ಮೈಸೂರು ಜಿಲ್ಲೆಯ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡಿನ ಯುಬಿ ತಯಾರಿಕಾ ಘಟಕದಲ್ಲಿ 98.56 ಕೋಟಿ ರೂ. ಮೌಲ್ಯದ ಬಿಯರ್ ಹಾಗೂ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಕೋಟಿ ಕೋಟಿ ಮೊತ್ತದ ಮದ್ಯ ವಶಕ್ಕೆ ಪಡೆಯಲಾಗಿದೆ. 6.03 ಲಕ್ಷ ರೂ. ಬಿಯರ್ ಪೆಟ್ಟಿಗೆ, ಟ್ಯಾಂಕ್ನಲ್ಲಿದ್ದ 66.16 ಲಕ್ಷ ಲೀಟರ್ ಬಿಯರ್, 6.5 ಲಕ್ಷ ಅಕ್ರಮವಾಗಿ ಸಂಗ್ರಹಿಸಿದ್ದ 7,000 ಬಿಯರ್ ರಟ್ಟಿನ ಪೆಟ್ಟಿಗೆಗಳು ಪತ್ತೆ ಆಗಿದ್ದು, ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಸದ್ಯ 17 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿ ಅಬಕಾರಿ ಪೊಲೀಸರಿಂದ ತನಿಖೆ ನಡೆಸಿದ್ದಾರೆ.
ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ ಕೇರಳಕ್ಕೆ ಸಾಗಿಸಿರುವ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಮಂಗಳವಾರ ಅನಾಮಧೇಯ ಕರೆ ಬಂದಿತ್ತು. ಇದರ ಆಧಾರದಲ್ಲಿ ಅವರು ಘಟಕಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ಅವರಿಗೆ ಸೂಚನೆ ನೀಡಿದ್ದರು. ಮೈಸೂರಿನ ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶನೊಂದಿಗೆ ಅಬಕಾರಿ ಅಧಿಕಾರಿಗಳು ನಂಜನಗೂಡಿನ ಯುಬಿ ಘಟಕಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ, ಲೆಕ್ಕದ ಪುಸ್ತಕದೊಂದಿಗೆ ಭೌತಿಕ ದಾಸ್ತಾನು ಪರಿಶೀಲಿಸಿದಾಗ 7000ದಷ್ಟು ಬಿಯರ್ ಪೆಟ್ಟಿಗೆಗಳನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿದ್ದು ಕಂಡು ಬಂದಿದೆ.
‘ಅಬಕಾರಿ ಕಾಯ್ದೆಯ ಅಡಿಯಲ್ಲಿ ಗಂಭೀರ ಪ್ರಕರಣವಾಗಿರುವುದರಿಂದ, ಪ್ರಕರಣ ದಾಖಲಿಸಿಕೊಂಡು ಘಟಕದಲ್ಲಿರುವ ಎಲ್ಲ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಕ್ಷರಶಃ ಇಡೀ ಘಟಕವನ್ನೇ ಜಪ್ತಿ ಮಾಡಿದಂತಾಗಿದೆ’ ಎಂದು ಅಬಕಾರಿ ಅಧಿಕಾರಿಗಳು ’ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಘಟನೆ ಸಂಬಂಧ, ಘಟಕ ಮತ್ತು 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಎಲ್ಲರೂ ತಲೆ ಮರೆಸಿಕೊಂಡಿದ್ದಾರೆ.
ಕೇರಳಕ್ಕೆ ಹೋಗಿ ವಾಪಸ್ ಬಂದಿತ್ತು: ‘ಘಟಕದಲ್ಲಿ 14 ಸಾವಿರ ಪೆಟ್ಟಿಗೆಗಳಷ್ಟು ಬಿಯರ್ ತಯಾರಿಸಿ 7000ಕ್ಕೆ ಮಾತ್ರ ಲೆಕ್ಕ ತೋರಿಸಲಾಗಿತ್ತು. 7000 ಸಾವಿರ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಿಸಲಾಗಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಘಟಕಕ್ಕೆ ಅಧಿಕಾರಿಗಳು ಭೇಟಿ ನೀಡುವ ಹೊತ್ತಿಗೆ ಆ ಪೆಟ್ಟಿಗೆಗಳನ್ನು ವಾಪಸ್ ಘಟಕದಲ್ಲಿ ತಂದಿರಿಸಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.
Beer worth Rs 98 crores was seized from a factory in Himmavu village of Nanjangudu taluk under Chamarajanagar Lok Sabha constituency on April 2, district officials said on Thursday.
03-05-24 10:34 am
Bangalore Correspondent
DK Suresh, HD Devegowda, Prajwal: ಪೆನ್ಡ್ರೈವ್...
02-05-24 10:54 pm
Karnataka Legislative Council Election date:...
02-05-24 10:23 pm
Prajwal Revanna mass rapist, Rahul Gandhi, Mo...
02-05-24 09:18 pm
CT Ravi, Prajwal Ravanna: ಪ್ರಜ್ವಲ್ ರೇವಣ್ಣ ಸೆಕ...
02-05-24 08:54 pm
03-05-24 10:28 am
HK News Desk
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
Senator Danesh Kumar Palyani ; ಪಾಕಿಸ್ತಾನದಲ್ಲಿ...
01-05-24 10:25 pm
02-05-24 07:52 pm
Mangalore Correspondent
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
Hot sun heat, Mangalore temperature; ಕರಾವಳಿಯಲ...
01-05-24 11:43 am
Mangalore Super gold and diamound showroom, T...
30-04-24 08:04 pm
03-05-24 10:24 am
HK News Desk
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm
Cyber Fraud, Online Crime: ಹೀಗೂ ಮೋಸ ಮಾಡ್ತಾರೆ,...
30-04-24 10:16 pm
Bangalore Crime, Fraud, House Rent: ಫ್ಲ್ಯಾಟ್...
29-04-24 11:50 am