ಬ್ರೇಕಿಂಗ್ ನ್ಯೂಸ್
06-04-24 06:55 pm Mangalore Correspondent ಕ್ರೈಂ
ಉಳ್ಳಾಲ, ಎ.6: ಗುಜರಿ ವ್ಯಾಪಾರಿಯೋರ್ವನನ್ನ ತನ್ನ ಬಾಡಿಗೆ ಮನೆಗೆ ಕರೆಸಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗಮಂದಿರ ಬಳಿ ಶನಿವಾರ ಸಂಜೆ ನಡೆದಿದೆ.
ಮಂಗಳೂರಿನ ಕಾವೂರು ಪಂಜಿಮೊಗರು ನಿವಾಸಿ ಹಮೀದ್ ಇರಿತಕ್ಕೊಳಗಾದ ಗುಜರಿ ವ್ಯಾಪಾರಿ. ಮೂಲತಃ ತಣ್ಣೀರುಬಾವಿ ನಿವಾಸಿ ಸದ್ರಿ ಉಳ್ಳಾಲದ ಮಹಾತ್ಮಗಾಂಧಿ ರಂಗಮಂದಿರದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ.
ಜಾವೇದ್ ಇಂದು ಸಂಜೆ ಹಮೀದ್ ನನ್ನು ಹಣಕಾಸಿನ ವಿಚಾರದಲ್ಲಿ ಮಾತುಕತೆ ನಡೆಸಲು ಉಳ್ಳಾಲದ ತನ್ನ ಬಾಡಿಗೆ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಹಮೀದ್ ಎದೆಯ ಭಾಗಕ್ಕೆ ಜಾವೇದ್ ಚೂರಿಯಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ಹಮೀದ್ ಹೇಗೋ ತಪ್ಪಿಸಿಕೊಂಡು ಉಳ್ಳಾಲದ ಖಾಸಗಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಹಮೀದ್ ಬಾಡಿಗೆ ಮನೆಯಿಂದ ತಪ್ಪಿಸಿ ಓಡಿದ ರಭಸಕ್ಕೆ ರಸ್ತೆಯಲ್ಲೆಲ್ಲಾ ರಕ್ತ ಹರಿದಿದೆ. ಗಂಭೀರ ಗಾಯಗೊಂಡಿದ್ದ ಹಮೀದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಜಾವೇದ್ ಕೃತ್ಯವೆಸಗಿ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಉಳ್ಳಾಲ ಪೊಲೀಸರಿಗೆ ಒಂದು ಮೊಬೈಲ್ ಲಭಿಸಿದೆ. ಜಾವೇದ್ ಒಬ್ಬನೇ ಕೃತ್ಯದಲ್ಲಿ ಭಾಗಿಯಾಗಿದ್ದನೋ ಅಥವಾ ಬೇರೆಯವರು ಪಾಲ್ಗೊಂಡಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣಕಾಸಿನ ಲೇವಾದೇವಿ ವಿಚಾರದಲ್ಲೇ ಇಬ್ಬರ ನಡುವೆ ವೈಷಮ್ಯ ಬೆಳೆದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪರಾರಿಯಾಗಿರುವ ಜಾವೇದ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹಮೀದ್ ಮನೆಯಲ್ಲಿ ಜೋಡಿ ಕೊಲೆ ನಡೆದಿತ್ತು!
ಪಂಜಿಮೊಗರಿನಲ್ಲಿ 2011ರ ಜೂನ್ 28ರಂದು ಹಮೀದ್ ಪತ್ನಿ ರಝಿಯಾ(35) ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ(8)ರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು. ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಈ ಡಬಲ್ ಮರ್ಡರ್, ಹತ್ಯೆ ಆರೋಪಿಗಳು 13 ವರ್ಷಗಳಾದರೂ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿರಲಿಲ್ಲ.
Murder attempt at Ullal in Mangalore, miscreants flee. Scrap dealer was attacked. He was called over some financial settlement matter to ullal. Hamid is a resident of tannirbavi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm