ಬ್ರೇಕಿಂಗ್ ನ್ಯೂಸ್
06-04-24 06:55 pm Mangalore Correspondent ಕ್ರೈಂ
ಉಳ್ಳಾಲ, ಎ.6: ಗುಜರಿ ವ್ಯಾಪಾರಿಯೋರ್ವನನ್ನ ತನ್ನ ಬಾಡಿಗೆ ಮನೆಗೆ ಕರೆಸಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗಮಂದಿರ ಬಳಿ ಶನಿವಾರ ಸಂಜೆ ನಡೆದಿದೆ.
ಮಂಗಳೂರಿನ ಕಾವೂರು ಪಂಜಿಮೊಗರು ನಿವಾಸಿ ಹಮೀದ್ ಇರಿತಕ್ಕೊಳಗಾದ ಗುಜರಿ ವ್ಯಾಪಾರಿ. ಮೂಲತಃ ತಣ್ಣೀರುಬಾವಿ ನಿವಾಸಿ ಸದ್ರಿ ಉಳ್ಳಾಲದ ಮಹಾತ್ಮಗಾಂಧಿ ರಂಗಮಂದಿರದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ.
ಜಾವೇದ್ ಇಂದು ಸಂಜೆ ಹಮೀದ್ ನನ್ನು ಹಣಕಾಸಿನ ವಿಚಾರದಲ್ಲಿ ಮಾತುಕತೆ ನಡೆಸಲು ಉಳ್ಳಾಲದ ತನ್ನ ಬಾಡಿಗೆ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಹಮೀದ್ ಎದೆಯ ಭಾಗಕ್ಕೆ ಜಾವೇದ್ ಚೂರಿಯಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ಹಮೀದ್ ಹೇಗೋ ತಪ್ಪಿಸಿಕೊಂಡು ಉಳ್ಳಾಲದ ಖಾಸಗಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಹಮೀದ್ ಬಾಡಿಗೆ ಮನೆಯಿಂದ ತಪ್ಪಿಸಿ ಓಡಿದ ರಭಸಕ್ಕೆ ರಸ್ತೆಯಲ್ಲೆಲ್ಲಾ ರಕ್ತ ಹರಿದಿದೆ. ಗಂಭೀರ ಗಾಯಗೊಂಡಿದ್ದ ಹಮೀದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಜಾವೇದ್ ಕೃತ್ಯವೆಸಗಿ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಉಳ್ಳಾಲ ಪೊಲೀಸರಿಗೆ ಒಂದು ಮೊಬೈಲ್ ಲಭಿಸಿದೆ. ಜಾವೇದ್ ಒಬ್ಬನೇ ಕೃತ್ಯದಲ್ಲಿ ಭಾಗಿಯಾಗಿದ್ದನೋ ಅಥವಾ ಬೇರೆಯವರು ಪಾಲ್ಗೊಂಡಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣಕಾಸಿನ ಲೇವಾದೇವಿ ವಿಚಾರದಲ್ಲೇ ಇಬ್ಬರ ನಡುವೆ ವೈಷಮ್ಯ ಬೆಳೆದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪರಾರಿಯಾಗಿರುವ ಜಾವೇದ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಹಮೀದ್ ಮನೆಯಲ್ಲಿ ಜೋಡಿ ಕೊಲೆ ನಡೆದಿತ್ತು!
ಪಂಜಿಮೊಗರಿನಲ್ಲಿ 2011ರ ಜೂನ್ 28ರಂದು ಹಮೀದ್ ಪತ್ನಿ ರಝಿಯಾ(35) ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ(8)ರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು. ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಈ ಡಬಲ್ ಮರ್ಡರ್, ಹತ್ಯೆ ಆರೋಪಿಗಳು 13 ವರ್ಷಗಳಾದರೂ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿರಲಿಲ್ಲ.
Murder attempt at Ullal in Mangalore, miscreants flee. Scrap dealer was attacked. He was called over some financial settlement matter to ullal. Hamid is a resident of tannirbavi.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm