ಬ್ರೇಕಿಂಗ್ ನ್ಯೂಸ್
08-04-24 07:02 pm Bangalore Correspondent ಕ್ರೈಂ
ಬೆಂಗಳೂರು, ಏ 08: ಖಾಸಗಿ ಟ್ರಸ್ಟ್ಗಳಿಗೆ ಸಿಎಸ್ಆರ್ ಫಂಡ್ ಅಡಿಯಲ್ಲಿ ಹಣ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಲು ಯತ್ನಿಸಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುಧೀರ್, ಕಿಶೋರ್, ಚಂದ್ರಶೇಖರ್, ವಿನಯ್ ಹಾಗೂ ತೀರ್ಥ ರಿಷಿ ಬಂಧಿತರು. ಕೃಷ್ಣಮೂರ್ತಿ ಎಂಬವರು ನೀಡಿದ ದೂರು ಆಧರಿಸಿ ತನಿಖೆ ಕೈಗೊಂಡ ಸಿಸಿಬಿ, 30.91 ಕೋಟಿ ರೂ ಖೋಟಾ ನೋಟುಗಳು ಹಾಗೂ 29.49 ಲಕ್ಷ ಮೌಲ್ಯದ ಅಸಲಿ ಹಣ ಜಪ್ತಿ ಮಾಡಿದ್ದಾರೆ.
ಬಂಧಿತರ ಪೈಕಿ ಓರ್ವ, ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಅವರ ವಿಶ್ವಾಸ ಬೆಳೆಸಿಕೊಂಡಿದ್ದಾನೆ. ತದನಂತರದಲ್ಲಿ ಅವರನ್ನು ಭೇಟಿ ಮಾಡಿ, ನಮಗೆ ಪರಿಚಯವಿರುವ ಕಂಪನಿಯವರ ಬಳಿ ಕಾನೂನುಬದ್ಧ ಹಣವಿದ್ದು, ಆ ಕಂಪನಿಯವರು ಅಧಿಕೃತವಾಗಿ ಟ್ರಸ್ಟ್, ಇನ್ನಿತರ ಸಂಸ್ಥೆಗಳಿಗೆ ಯಾವುದೇ ಲಾಭಾಂಶವಿಲ್ಲದೆ ಹಣ ವರ್ಗಾಯಿಸುವುದಾಗಿ ಹೇಳಿದ್ದಾನೆ. ಅದಕ್ಕೆ ಪ್ರತಿಯಾಗಿ ಆ ಟ್ರಸ್ಟ್ ಅಥವಾ ಸಂಸ್ಥೆಗಳು ಕಂಪನಿಯವರಿಗೆ ಶೇ.40 ರಷ್ಟು ಹಣವನ್ನು ನಗದು ಮುಖಾಂತರ ಮಾತ್ರ ಸಲ್ಲಿಸಿದರೆ ಸಾಕು. ಈ ವ್ಯವಸ್ಥೆ ಮಾಡುವುದಕ್ಕೆ ನೀವು ನಮಗೆ ಶೇ.10ರಷ್ಟು ಕಮಿಷನ್ ಹಣ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾನೆ. ಒಂದು ಪಾರ್ಟಿಯ ಬಳಿ ಲಭ್ಯವಿರುವ ಕಪ್ಪು ಹಣವನ್ನು ವಿಡಿಯೋ ಕಾಲ್ ಮುಖಾಂತರ ತೋರಿಸಲು ನೀವು ನಮಗೆ 25 ಲಕ್ಷ ಹಣವನ್ನು ಮುಂಗಡವಾಗಿ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾನೆ.
ಈ ಹಣವನ್ನು ನೀಡಿದರೆ ನಾವು ನಿಮಗೆ ವಿಡಿಯೋ ಕಾಲ್ ಮಾಡಿ ನಮ್ಮ ಬಳಿ ಇರುವ ಹಣದ ಬಂಡಲ್ಗಳನ್ನು ತೋರಿಸುತ್ತೇವೆ ಎಂದು ನಂಬಿಸಿದ್ದಾನೆ. ಅದರಂತೆ ಆ ವ್ಯಕ್ತಿಯನ್ನು ಒಂದು ಸ್ಥಳಕ್ಕೆ ಕರೆಸಿಕೊಂಡು ವಿಡಿಯೋ ಕಾಲ್ ಮುಖಾಂತರ ತಮ್ಮ ಬಳಿ ಇರುವ ಹಣದ ಬಂಡಲ್ಗಳನ್ನು ತೋರಿಸಿದ್ದಾನೆ. ವಿಡಿಯೋ ಕಾಲ್ ಮಾಡಿದ ವ್ಯಕ್ತಿಯ ಬಗ್ಗೆ ಸಂದೇಹಪಟ್ಟು ಇವರ ವಿರುದ್ಧ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಎಸಿಪಿ ಧರ್ಮೇಂದ್ರ ನೇತೃತ್ವದ ತಂಡ ಐದು ಮಂದಿಯನ್ನು ಬಂಧಿಸಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.
ಅಗ್ರಹಾರ ದಾಸರಹಳ್ಳಿ ಮೂಲದ ಆರೋಪಿ ಕಿಶೋರ್ ಮೇಲೆ ಈ ಹಿಂದೆ ಹೆಚ್.ಡಿ.ಕೋಟೆ, ಹೈಗ್ರೌಂಡ್ಸ್, ಕೆ.ಆರ್.ಪುರಂ ಪೊಲೀಸ್ ಠಾಣೆಗಳಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಲ್ಲದೆ ಮುಂಬೈನಲ್ಲಿಯೂ ಈತನ ವಿರುದ್ಧ ಪ್ರಕರಣ ದಾಖಲಾಗಿದೆ. ವಂಚನೆ ಸಂಬಂಧ ಕಿಶೋರ್ ಮನೆ ಹಾಗೂ ಕಚೇರಿಯಲ್ಲಿದ್ದ 23.49 ಲಕ್ಷ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ರೈಸ್ ಪುಲ್ಲಿಂಗ್, ಹವಾಲ ದಂಧೆಯಲ್ಲಿ ತೊಡಗಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ.
ವಿಚಾರಣೆ ವೇಳೆ ಆರೋಪಿ ದೊಡ್ಡಮಟ್ಟದಲ್ಲಿ ಖೋಟಾ ನೋಟುಗಳನ್ನು ಆನ್ಲೈನ್ ಮೂಲಕ ತರಿಸಿಕೊಂಡಿರುವುದಾಗಿ ತಿಳಿಸಿದ್ದು, ಎಲ್ಲಿಂದ ಮತ್ತು ಯಾವಾಗ ಹಣ ತರಿಸಿಕೊಂಡ ಸೇರಿ ಇನ್ನಿತರ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The CCB police have arrested five persons for allegedly duping private trusts of lakhs of rupees by promising them money under the CSR fund. The arrested have been identified as Sudheer, Kishore, Chandrashekar, Vinay and Theertha Rishi. Based on a complaint lodged by one Krishnamurthy, the CCB seized fake currency notes worth Rs 30.91 crore and original currency worth Rs 29.49 lakh.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm