ಬ್ರೇಕಿಂಗ್ ನ್ಯೂಸ್
08-04-24 10:49 pm Bangalore Correspondent ಕ್ರೈಂ
ಬೆಂಗಳೂರು, ಎ.8: ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ಸಿಎಸ್ಆರ್ ಫಂಡ್ ತೆಗೆಸಿಕೊಡುತ್ತೇವೆಂದು ಹೇಳಿ ಬೆಂಗಳೂರಿನ ನಾಲ್ವರು ಸೇರಿ ಆಶ್ರಮ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮೋಸಗೊಳಿಸಿ ಅವರಿಂದಲೇ 15 ಲಕ್ಷ ಪೀಕಿಸಿದ ಘಟನೆ ಬೆಳಕಿಗೆ ಬಂದಿದ್ದು ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
ಮುಂಬೈನಲ್ಲಿ ಬಿಎಸ್ಸಿ ಪದವಿ ಪಡೆದಿದ್ದ ಸುನೀತಾ(36), ತಮಿಳುನಾಡು ಮೂಲದ ಇಲೆಕ್ಟ್ರಿಕಲ್ ಇಂಜಿನಿಯರ್ ಜಯಕುಮಾರ್ (42), ಬನಶಂಕರಿಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ಜಿತಿನ್ (20), ಬೆಂಗಳೂರಿನಲ್ಲಿ ಗುಜರಾತಿ ಢಾಬಾ ನಡೆಸುತ್ತಿರುವ ಮಂಗಳೂರು ಮೂಲದ ರಾಜೇಂದ್ರ ಹೆಗ್ಡೆ(56) ಬಂಧಿತರು.
ಜ್ಞಾನಜ್ಯೋತಿ ನಗರದಲ್ಲಿ ಶಂಕರಾನಂದ ಆಶ್ರಮ ನಡೆಸುತ್ತಿರುವ ಶಂಕರಾನಂದ ಮೂರ್ತಿ (67) ಮೋಸ ಹೋದವರು. ಇವರು ಮಾರ್ಚ್ 14ರಂದು ವಕೀಲರ ಕಚೇರಿಯೊಂದಕ್ಕೆ ತೆರಳಿದ್ದ ವೇಳೆ ಸುನೀತಾ ಮತ್ತು ಇತರರು ಭೇಟಿಯಾಗಿದ್ದರು. ಆರೋಪಿಗಳು ತಮ್ಮನ್ನು ಎಕ್ಸ್ ಪೆಡಿಟರ್ಸ್ ಇಂಟರ್ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿದ್ದು ನಮ್ಮ ಕಂಪನಿಯಿಂದ ಕೋಟಿಗಟ್ಟಲೆ ಹಣವನ್ನು ಸಿಎಸ್ಆರ್ ಫಂಡ್ ಮೂಲಕ ಟ್ರಸ್ಟ್ ಗಳಿಗೆ ಕೊಡುತ್ತಾರೆ, ನಿಮ್ಮ ಟ್ರಸ್ಟ್ ವ್ಯಾಲಿಡ್ ಆಗಿದ್ದರೆ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದರು. ಇದಕ್ಕಾಗಿ ದಾಖಲೆ ಪತ್ರಗಳು, ಪ್ರಕ್ರಿಯೆಗಳಿಗಾಗಿ ಚಾರ್ಜ್ ಆಗುತ್ತದೆ, 15 ಲಕ್ಷ ರೂ. ಚಾರ್ಜ್ ಕಟ್ಟಿದರೆ ಕೋಟಿಗೂ ಹೆಚ್ಚಿನ ಸಿಎಸ್ಆರ್ ಫಂಡ್ ತೆಗೆಸಿಕೊಡುತ್ತೇವೆ ಎಂದಿದ್ದಾರೆ.
ಇದರಂತೆ, ಮೂರ್ತಿಯವರು ಅರ್ಜಿ ಇನ್ನಿತರ ಶುಲ್ಕವೆಂದು ಸುನೀತಾ ಹೇಳಿದ್ದ ಧನಲಕ್ಷ್ಮಿ ಟ್ರೇಡರ್ಸ್ ಹೆಸರಿಗೆ 15 ಲಕ್ಷ ರೂ.ವನ್ನು ಆರ್ ಟಿಜಿಎಸ್ ಮೂಲಕ ಪಾವತಿ ಮಾಡಿದ್ದರು. ಆರೋಪಿಗಳು ಮತ್ತೆ 15 ಲಕ್ಷ ರೂ.ವನ್ನು ಡಿಡಿ ಮಾಡಿದಲ್ಲಿ ಮತ್ತಷ್ಟು ಹಣ ಸಿಗುತ್ತದೆ ಎಂದು ಹೇಳಿದ್ದು ಶಂಕರಾನಂದ ಮೂರ್ತಿ ಅದನ್ನೂ ರೆಡಿ ಮಾಡಿಸಿದ್ದರು. ಡೀಡಿಯನ್ನು ಮಾತ್ರ ಕೊಟ್ಟಿರಲಿಲ್ಲ. ಮಾರ್ಚ್ 22ರಂದು ಕ್ರೆಗ್ ಪಾರ್ಕ್ ರಸ್ತೆಯ ಹೊಟೇಲ್ ಒಂದರಲ್ಲಿ ಇವರು ಮೀಟ್ ಆಗಿದ್ದರು. ಆರೋಪಿಗಳು ಅಲ್ಲಿದ್ದುಕೊಂಡು ಒಳಗಡೆ ನಮ್ಮ ಬಾಸ್ ಇದ್ದಾರೆ, ಈಗಷ್ಟೇ 15 ಲಕ್ಷ ಡಿಡಿ ಪಡೆದು ಮತ್ತೊಬ್ಬರಿಗೆ ಕೋಟಿಗೂ ಹೆಚ್ಚಿನ ಸಿಎಸ್ಆರ್ ಫಂಡ್ ನೀಡಿದ್ದಾರೆ ಎಂದು ನಂಬಿಸಿದ್ದಾರೆ. ನಿಮ್ಮ ಫಂಡ್ ಪೆಂಡಿಂಗ್ ಇದೆ ಎಂದಿದ್ದಾರೆ. ಇಷ್ಟಾಗುತ್ತಲೇ ಶಂಕರಾನಂದ ಮೂರ್ತಿ ತನ್ನ ಪರಿಚಯದ ವಕೀಲರನ್ನು ಸಂಪರ್ಕಿಸಿ, ವಿಷಯ ಹೇಳಿದ್ದಾರೆ. ವಕೀಲರು ಆರೋಪಿಗಳನ್ನು ಸಂಪರ್ಕಿಸಿದಾಗ, ಅವರನ್ನು ಬೆದರಿಸುವ ಯತ್ನ ಮಾಡಿದ್ದಾರೆ. ಅಲ್ಲದೆ, ಶಂಕರಾನಂದ ಅವರನ್ನೂ ಬೆದರಿಸಿದ್ದಾರೆ.
ಆರೋಪಿಗಳು ತಮ್ಮ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್, ಪ್ರತಿಷ್ಠಿತ ಕಂಪನಿಗಳ ದಾಖಲೆ ಪತ್ರಗಳನ್ನು ಮಾಡಿಕೊಂಡಿದ್ದು ತಾವು ಒರಿಜಿನಲ್ ಎಂದು ಹೇಳಿ ನಂಬಿಸಿದ್ದರು. ಅಲ್ಲದೆ, ಮೂರ್ತಿ ಅವರಲ್ಲಿ ಸಿಎಸ್ಆರ್ ಫಂಡ್ ಕೊಡಿಸುವುದಕ್ಕಾಗಿ ನಿಮ್ಮ ಟ್ರಸ್ಟ್ ಹೆಸರಲ್ಲಿರುವ 80 ಜಿ ತೆರಿಗೆ ವಿನಾಯ್ತಿ ಒದಗಿಸುವ ದಾಖಲೆ ಪತ್ರವನ್ನೂ ನೀಡುವಂತೆ ಕೇಳಿದ್ದರು. ಅಷ್ಟರಲ್ಲಿ ವಕೀಲರ ಸೂಚನೆಯಂತೆ ಮೂರ್ತಿ ಪೊಲೀಸರಿಗೆ ದೂರು ನೀಡಿದ್ದು, ನಾಲ್ವರು ಖದೀಮರು ಅರೆಸ್ಟ್ ಆಗಿದ್ದಾರೆ.
CSR funds, cheat charitable trust in Bangalore of 15 lakhs, four arrested by CCB police including person from Mangalore. Four people have been arrested by Halasur police station here on the charge of cheating under the pretext of donating crores of rupees to charitable trusts. Sunitha, Jayakumar, resident of Kancheepuram Palli Karne, Tamil Nadu, Jatin Aggarwal of Uttarahalli and Rajendra Hegde of Gujarat have been identified as the arrested accused.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 09:25 pm
Mangalore Correspondent
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm