ಬ್ರೇಕಿಂಗ್ ನ್ಯೂಸ್
09-04-24 08:51 pm HK News Desk ಕ್ರೈಂ
ತೆಲಂಗಾಣ, ಏ.09: ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವ್ಯಕ್ತಿಯೊಬ್ಬ ಕುಟುಂಬದಲ್ಲಿ ಜಗಳಗಳನ್ನು ಉಂಟುಮಾಡಿ, ಕೊನೆಗೆ ಆ ಮನೆಯಲ್ಲಿ ಚಿಕ್ಕ ಮಗುವಿನಿಂದ ಹಿಡಿದು ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದಾನೆ.
ಸೋಮವಾರ ರಾತ್ರಿ ತೆಲಂಗಾಣದ ರಾಜೇಂದ್ರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ನಡೆದಿದೆ. ಚೆವೆಲ್ಲಾ ಮಂಡಲದ ಮಲ್ಕಾಪುರ ಗ್ರಾಮದ ಆನಂದ್ (38) ಮತ್ತು ಇಂದಿರಾ (36) ದಂಪತಿಗೆ ಶ್ರೇಯನ್ಸ್ (4) ಎಂಬ ಮಗನಿದ್ದ. ಆನಂದ್ ವೃತ್ತಿಯಲ್ಲಿ ಹಾಲಿನ ವ್ಯಾಪಾರಿ. ಮೂರು ವರ್ಷಗಳಿಂದ ಬಂಡ್ಲಗುಡಜಗಿರ್ನ ಸನ್ಸಿಟಿ ಪ್ರದೇಶದ ಯಮುನಾ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಹಾಲಿನ ವ್ಯಾಪಾರ ಮಾಡುತ್ತಿರುವಾಗಲೇ ಆನಂದ್ ಆನ್ಲೈನ್ ಗೇಮ್ಗಳ ಚಟಕ್ಕೆ ಬಿದ್ದಿದ್ದ. ಈ ಪ್ರಕ್ರಿಯೆಯಲ್ಲಿ ಸುಮಾರು 15 ಲಕ್ಷ ರೂ.ಗಳಷ್ಟು ಸಾಲ ಮಾಡಿ ಆರ್ಥಿಕ ನಷ್ಟ ಅನುಭವಿಸಿದ್ದ. ಈ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
15 ದಿನಗಳ ಹಿಂದೆ ಎರಡೂ ಮನೆಯವರು ಹಾಗೂ ಸ್ನೇಹಿತರು ಆನಂದ್ ಮನೆಗೆ ಬಂದು ಆನ್ಲೈನ್ ಗೇಮ್ ಆಡದಂತೆ ಬುದ್ಧಿಮಾತು ಹೇಳಿದ್ದರು. ಆದರೆ ಆನಂದನ ವರ್ತನೆಯಲ್ಲಿ ಮಾತ್ರ ಯಾವುದೇ ಬದಲಾವಣೆ ಇರಲಿಲ್ಲ. ಇದಲ್ಲದೆ, ಮೂರು ದಿನಗಳ ಹಿಂದೆ ಮತ್ತೊಮ್ಮೆ ಆನ್ಲೈನ್ ಬೆಟ್ಟಿಂಗ್ ಆಡಿದ್ದ. ಸೋಮವಾರ ಬೆಳಗ್ಗೆಯಿಂದ ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಆ ವೇಳೆ ಇಂದಿರಾ, ತಮ್ಮ ಕುಟುಂಬದ ಸದಸ್ಯರಿಗೆ ಕರೆ ಮಾಡಿ ನಡೆದ ಸಂಗತಿಯನ್ನು ವಿವರಿಸಿ ಕಣ್ಣೀರಿಟ್ಟಿದ್ದರು. ಅಲ್ಲದೆ, ಆನಂದ್ ಕೂಡ ತನ್ನ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದರಿಂದ ಭಯಗೊಂಡ ಉಭಯ ಕುಟುಂಬದ ಸದಸ್ಯರು ಎಷ್ಟೇ ಕರೆ ಮಾಡಿದರೂ ಇಬ್ಬರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಎಲ್ಲರೂ ಚಿಂತಿತರಾಗಿ ಅಪಾರ್ಟ್ಮೆಂಟ್ಗೆ ಬಂದು ನೋಡಿದಾಗ ಆನಂದ್, ಇಂದಿರಾ ಮತ್ತು ಅವರ ಮಗ ಸಾವಿಗೀಡಾಗಿರುವುದು ಕಂಡುಬಂದಿದೆ. ಕೂಡಲೇ ರಾಜೇಂದ್ರನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಅವರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ದಂಪತಿ ನಡುವೆ ಜಗಳ ನಡೆದು, ಪತ್ನಿಯನ್ನು ಕೊಲೆಗೈದು, ಬಳಿಕ ಆನಂದ್, ಮಗನಿಗೆ ಕ್ರಿಮಿನಾಶಕ ಕುಡಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದಲ್ಲದೆ, ತಂದೆ ಮತ್ತು ಮಗನ ಬಾಯಲ್ಲಿ ನೊರೆ ಬಂದಿರುವುದು ಅನುಮಾನಕ್ಕೆ ಪುಷ್ಠಿ ನೀಡಿದೆ. ಆದರೆ ಇಂದಿರಾ ಬಾಯಿಯಿಂದ ನೊರೆ ಬಂದಿರಲಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸತ್ಯಾಂಶ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಬೆಳಗ್ಗೆಯಿಂದ ದಂಪತಿ ಜಗಳವಾಡುತ್ತಿದ್ದರು ಎಂದು ಅಪಾರ್ಟ್ಮೆಂಟ್ನ ವಾಚ್ಮನ್ ಪೊಲೀಸರಿಗೆ ತಿಳಿಸಿದ್ದಾರೆ.
In a tragic incident, a man killed his wife and son before ending his life at Bandlaguda in Rajendranagar over financial problems.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm