ಬ್ರೇಕಿಂಗ್ ನ್ಯೂಸ್
09-04-24 08:51 pm HK News Desk ಕ್ರೈಂ
ತೆಲಂಗಾಣ, ಏ.09: ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವ್ಯಕ್ತಿಯೊಬ್ಬ ಕುಟುಂಬದಲ್ಲಿ ಜಗಳಗಳನ್ನು ಉಂಟುಮಾಡಿ, ಕೊನೆಗೆ ಆ ಮನೆಯಲ್ಲಿ ಚಿಕ್ಕ ಮಗುವಿನಿಂದ ಹಿಡಿದು ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದಾನೆ.
ಸೋಮವಾರ ರಾತ್ರಿ ತೆಲಂಗಾಣದ ರಾಜೇಂದ್ರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ನಡೆದಿದೆ. ಚೆವೆಲ್ಲಾ ಮಂಡಲದ ಮಲ್ಕಾಪುರ ಗ್ರಾಮದ ಆನಂದ್ (38) ಮತ್ತು ಇಂದಿರಾ (36) ದಂಪತಿಗೆ ಶ್ರೇಯನ್ಸ್ (4) ಎಂಬ ಮಗನಿದ್ದ. ಆನಂದ್ ವೃತ್ತಿಯಲ್ಲಿ ಹಾಲಿನ ವ್ಯಾಪಾರಿ. ಮೂರು ವರ್ಷಗಳಿಂದ ಬಂಡ್ಲಗುಡಜಗಿರ್ನ ಸನ್ಸಿಟಿ ಪ್ರದೇಶದ ಯಮುನಾ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಹಾಲಿನ ವ್ಯಾಪಾರ ಮಾಡುತ್ತಿರುವಾಗಲೇ ಆನಂದ್ ಆನ್ಲೈನ್ ಗೇಮ್ಗಳ ಚಟಕ್ಕೆ ಬಿದ್ದಿದ್ದ. ಈ ಪ್ರಕ್ರಿಯೆಯಲ್ಲಿ ಸುಮಾರು 15 ಲಕ್ಷ ರೂ.ಗಳಷ್ಟು ಸಾಲ ಮಾಡಿ ಆರ್ಥಿಕ ನಷ್ಟ ಅನುಭವಿಸಿದ್ದ. ಈ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
15 ದಿನಗಳ ಹಿಂದೆ ಎರಡೂ ಮನೆಯವರು ಹಾಗೂ ಸ್ನೇಹಿತರು ಆನಂದ್ ಮನೆಗೆ ಬಂದು ಆನ್ಲೈನ್ ಗೇಮ್ ಆಡದಂತೆ ಬುದ್ಧಿಮಾತು ಹೇಳಿದ್ದರು. ಆದರೆ ಆನಂದನ ವರ್ತನೆಯಲ್ಲಿ ಮಾತ್ರ ಯಾವುದೇ ಬದಲಾವಣೆ ಇರಲಿಲ್ಲ. ಇದಲ್ಲದೆ, ಮೂರು ದಿನಗಳ ಹಿಂದೆ ಮತ್ತೊಮ್ಮೆ ಆನ್ಲೈನ್ ಬೆಟ್ಟಿಂಗ್ ಆಡಿದ್ದ. ಸೋಮವಾರ ಬೆಳಗ್ಗೆಯಿಂದ ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಆ ವೇಳೆ ಇಂದಿರಾ, ತಮ್ಮ ಕುಟುಂಬದ ಸದಸ್ಯರಿಗೆ ಕರೆ ಮಾಡಿ ನಡೆದ ಸಂಗತಿಯನ್ನು ವಿವರಿಸಿ ಕಣ್ಣೀರಿಟ್ಟಿದ್ದರು. ಅಲ್ಲದೆ, ಆನಂದ್ ಕೂಡ ತನ್ನ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದರಿಂದ ಭಯಗೊಂಡ ಉಭಯ ಕುಟುಂಬದ ಸದಸ್ಯರು ಎಷ್ಟೇ ಕರೆ ಮಾಡಿದರೂ ಇಬ್ಬರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಎಲ್ಲರೂ ಚಿಂತಿತರಾಗಿ ಅಪಾರ್ಟ್ಮೆಂಟ್ಗೆ ಬಂದು ನೋಡಿದಾಗ ಆನಂದ್, ಇಂದಿರಾ ಮತ್ತು ಅವರ ಮಗ ಸಾವಿಗೀಡಾಗಿರುವುದು ಕಂಡುಬಂದಿದೆ. ಕೂಡಲೇ ರಾಜೇಂದ್ರನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಅವರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ದಂಪತಿ ನಡುವೆ ಜಗಳ ನಡೆದು, ಪತ್ನಿಯನ್ನು ಕೊಲೆಗೈದು, ಬಳಿಕ ಆನಂದ್, ಮಗನಿಗೆ ಕ್ರಿಮಿನಾಶಕ ಕುಡಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದಲ್ಲದೆ, ತಂದೆ ಮತ್ತು ಮಗನ ಬಾಯಲ್ಲಿ ನೊರೆ ಬಂದಿರುವುದು ಅನುಮಾನಕ್ಕೆ ಪುಷ್ಠಿ ನೀಡಿದೆ. ಆದರೆ ಇಂದಿರಾ ಬಾಯಿಯಿಂದ ನೊರೆ ಬಂದಿರಲಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸತ್ಯಾಂಶ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಬೆಳಗ್ಗೆಯಿಂದ ದಂಪತಿ ಜಗಳವಾಡುತ್ತಿದ್ದರು ಎಂದು ಅಪಾರ್ಟ್ಮೆಂಟ್ನ ವಾಚ್ಮನ್ ಪೊಲೀಸರಿಗೆ ತಿಳಿಸಿದ್ದಾರೆ.
In a tragic incident, a man killed his wife and son before ending his life at Bandlaguda in Rajendranagar over financial problems.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm