ಬ್ರೇಕಿಂಗ್ ನ್ಯೂಸ್
10-04-24 12:16 pm Bangalore Correspondent ಕ್ರೈಂ
ಬೆಂಗಳೂರು, ಏ 10: ತಾಯಿಯಿಂದಲೇ ಇಬ್ಬರು ಮಕ್ಕಳು ಹತ್ಯೆಗೀಡಾದ ದಾರುಣ ಘಟನೆ ಮಂಗಳವಾರ ತಡರಾತ್ರಿ ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಷ್ಮೀ (9) ಹಾಗೂ ಗೌತಮ್ (7) ಕೊಲೆಯಾದ ಮಕ್ಕಳು ಎಂದು ತಿಳಿದು ಬಂದಿದೆ. ಕೊಲೆ ಬಳಿಕ ಮಹಿಳೆಯೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾಳೆ.
ಗಂಗಾದೇವಿ ಕೊಲೆ ಮಾಡಿರುವ ಆರೋಪಿ ತಾಯಿಯಾಗಿದ್ದು, ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾಳೆ ಎನ್ನಲಾಗಿದೆ. ದಿಂಬಿನಿಂದ ಉಸಿರುಗಟ್ಟಿಸಿ ಮಕ್ಕಳನ್ನು ಕೊಂದಿರುವ ಆರೋಪದ ಮೇಲೆ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲತಃ ಆಂಧ್ರಪ್ರದೇಶದವರಾದ ಗಂಗಾದೇವಿ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಆರೋಪಿ ಗಂಗಾದೇವಿ ಖಾಸಗಿ ಕಂಪನಿಯೊಂದರ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೆ, ಆಕೆಯ ಪತಿ ಬಿಬಿಎಂಪಿಯ ಗುತ್ತಿಗೆ ಆಧಾರದ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಮಾರ್ಚ್ ತಿಂಗಳಿನಲ್ಲಿ ಗಂಡನ ವಿರುದ್ಧ ಗಂಗಾದೇವಿಯೇ ನೀಡಿದ್ದ ದೂರಿನ ಅನ್ವಯ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಂಗಳವಾರ ಇಬ್ಬರು ಮಕ್ಕಳೊಂದಿಗೆ ಯುಗಾದಿ ಹಬ್ಬ ಆಚರಿಸಿದ್ದ ಗಂಗಾದೇವಿ, ತಡರಾತ್ರಿ ಮಕ್ಕಳಿಬ್ಬರನ್ನೂ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ರಾತ್ರಿ 1 ಗಂಟೆ ಸುಮಾರಿಗೆ ತಾನೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಗಲಾಟೆಯಾಗಿದೆ ಎಂದು ಪೊಲೀಸರ ನೆರವು ಕೇಳಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರ ಎದುರು ತಾನೇ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಗಂಗಾದೇವಿ ಒಪ್ಪಿಕೊಂಡಿದ್ದಾರೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಕುಟುಂಬ ನಿರ್ವಹಣೆಗೆ ಕಷ್ಟ ಆಗುತ್ತಿದ್ದುದರಿಂದ ಮಾನಸಿಕ ಒತ್ತಡಕ್ಕೊಳಪಟ್ಟು ಆರೋಪಿಯೇ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಡಾವತ್ ಮಾಹಿತಿ ನೀಡಿದ್ದಾರೆ.
Mother kills two of her children using pillow in Bangalore and later calls police to her house and confesses the crime she has commit. Recently her husband was arrested on POSCO charges and she was mentally disturbed.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am